social welfare office
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ವಜಾತಿ ಪ್ರೇಮದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಒಳಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು, ಇಲಾಖೆಯಲ್ಲಿ 4 ವರ್ಷಗಳಿಂದ ಟಿಕಾಣಿ ಹೂಡಿರುವ ಮೂವರು ಅಧಿಕಾರಿಗಳನ್ನು ಈ ಕೂಡಲೇ ಅವರ ಸ್ಥಾನಗಳಿಂದ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪತ್ರದಲ್ಲಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಶಿವರಾಯ ಅಕ್ಷರಕಿ ಅವರು, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸರಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮತ್ತು ಸಮಾಜ ಕಲ್ಯಾಣ ಆಯುಕ್ತ ರಾಕೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಳಮೀಸಲಾತಿ ವರ್ಗೀಕರಣ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಈ ಅಧಿಕಾರಿಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಅನುಕೂಲವಾಗುವಂತೆ ನಡೆದುಕೊಂಡಿದ್ದಾರೆ. ಸುಮಾರು 35 ವರ್ಷಗಳ ಮಾದಿಗ ಸಮುದಾಯದ ಹೋರಾಟವನ್ನು ಸಂಪೂರ್ಣವಾಗಿ ಕಡೆಗಣಿಸಿ, ಅವರನ್ನು ಮೂಲೆಗುಂಪು ಮಾಡುವ ರೀತಿಯಲ್ಲಿ ನಡೆದುಕೊಂಡಿರುವುದು ಖಂಡನೀಯ ಎಂದು ಪತ್ರದಲ್ಲಿ ಹೇಳಿದ್ದಾರೆ.
ಸಮಾಜ ಕಲ್ಯಾಣ ಸಚಿವರಾದ ಡಾ. ಮಹದೇವಪ್ಪ ಅವರು, ಇಲಾಖೆಯ ಮುಖ್ಯಸ್ಥರಾಗಿ ಎಲ್ಲಾ ಜಾತಿಗಳಿಗೆ ಸಮಾನ ನ್ಯಾಯ ಒದಗಿಸುವ ಬದಲು, ಕೇವಲ ಒಂದು ಸಮುದಾಯದ ಪ್ರತಿನಿಧಿಗಳಂತೆ ವರ್ತಿಸಿದ್ದಾರೆ. ಸರಕಾರದ ಆದೇಶ ಹೊರಡಿಸುವಾಗಲೂ, ಮಾದಿಗ ಸಮುದಾಯವನ್ನು ‘ಬಿ’ ಗುಂಪಿನಲ್ಲಿ ಸೇರ್ಪಡೆ ಮಾಡಿ ಗೊಂದಲ ಮೂಡಿಸಿದ್ದಾರೆ. ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಸೇರಿಸುವ ಜವಾಬ್ದಾರಿಯನ್ನು ಹೊರತುಪಡಿಸಿ, ಪಕ್ಷಪಾತದಿಂದ ನಡೆದುಕೊಂಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿರುವ ಈ ತಾರತಮ್ಯ ಕೇವಲ ಮೀಸಲಾತಿ ವಿಷಯಕ್ಕೆ ಮಾತ್ರ ಸೀಮಿತವಾಗಿಲ್ಲ. ಇಲಾಖೆಯ ಅನುದಾನ ಹಂಚಿಕೆಯಲ್ಲೂ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವಿಶೇಷವಾಗಿ, ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ನಾಲ್ಕು ವರ್ಷಗಳಿಂದಲೂ ಒಂದೇ ಹುದ್ದೆಯಲ್ಲಿ ಮುಂದುವರಿದಿದ್ದು, ಈ ರೀತಿಯ ತಾರತಮ್ಯದ ನಡೆಗೆ ಸಹಕಾರ ನೀಡುತ್ತಿದ್ದಾರೆ. ಈ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡದಿದ್ದರೆ, ಅವರ ವಿರುದ್ಧ ದೊಡ್ಡ ಪ್ರಮಾಣದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ, ಮುಖ್ಯಮಂತ್ರಿಗಳು ಕೂಡಲೇ ಈ ಮೂವರನ್ನು ತಮ್ಮ ಸ್ಥಾನದಿಂದ ಬದಲಾಯಿಸಿ, ನ್ಯಾಯಯುತ ಆಡಳಿತಕ್ಕೆ ದಾರಿ ಮಾಡಿಕೊಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…