ರಾಜ್ಯ

4 ವರ್ಷಗಳಿಂದ ಟಿಕಾಣಿ ಹೂಡಿರುವ ಅಧಿಕಾರಿಗಳ ವರ್ಗಾಯಿಸಿ : ಒಳಮೀಸಲಾತಿ ಹೋರಾಟಗಾರರಿಂದ ಸಿಎಂಗೆ ಪತ್ರ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ವಜಾತಿ ಪ್ರೇಮದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಒಳಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು, ಇಲಾಖೆಯಲ್ಲಿ 4 ವರ್ಷಗಳಿಂದ ಟಿಕಾಣಿ ಹೂಡಿರುವ ಮೂವರು ಅಧಿಕಾರಿಗಳನ್ನು ಈ ಕೂಡಲೇ ಅವರ ಸ್ಥಾನಗಳಿಂದ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಶಿವರಾಯ ಅಕ್ಷರಕಿ ಅವರು, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸರಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮತ್ತು ಸಮಾಜ ಕಲ್ಯಾಣ ಆಯುಕ್ತ ರಾಕೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಳಮೀಸಲಾತಿ ವರ್ಗೀಕರಣ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಈ ಅಧಿಕಾರಿಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಅನುಕೂಲವಾಗುವಂತೆ ನಡೆದುಕೊಂಡಿದ್ದಾರೆ. ಸುಮಾರು 35 ವರ್ಷಗಳ ಮಾದಿಗ ಸಮುದಾಯದ ಹೋರಾಟವನ್ನು ಸಂಪೂರ್ಣವಾಗಿ ಕಡೆಗಣಿಸಿ, ಅವರನ್ನು ಮೂಲೆಗುಂಪು ಮಾಡುವ ರೀತಿಯಲ್ಲಿ ನಡೆದುಕೊಂಡಿರುವುದು ಖಂಡನೀಯ ಎಂದು ಪತ್ರದಲ್ಲಿ ಹೇಳಿದ್ದಾರೆ.

ಸಮಾಜ ಕಲ್ಯಾಣ ಸಚಿವರಾದ ಡಾ. ಮಹದೇವಪ್ಪ ಅವರು, ಇಲಾಖೆಯ ಮುಖ್ಯಸ್ಥರಾಗಿ ಎಲ್ಲಾ ಜಾತಿಗಳಿಗೆ ಸಮಾನ ನ್ಯಾಯ ಒದಗಿಸುವ ಬದಲು, ಕೇವಲ ಒಂದು ಸಮುದಾಯದ ಪ್ರತಿನಿಧಿಗಳಂತೆ ವರ್ತಿಸಿದ್ದಾರೆ. ಸರಕಾರದ ಆದೇಶ ಹೊರಡಿಸುವಾಗಲೂ, ಮಾದಿಗ ಸಮುದಾಯವನ್ನು ‘ಬಿ’ ಗುಂಪಿನಲ್ಲಿ ಸೇರ್ಪಡೆ ಮಾಡಿ ಗೊಂದಲ ಮೂಡಿಸಿದ್ದಾರೆ. ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಸೇರಿಸುವ ಜವಾಬ್ದಾರಿಯನ್ನು ಹೊರತುಪಡಿಸಿ, ಪಕ್ಷಪಾತದಿಂದ ನಡೆದುಕೊಂಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿರುವ ಈ ತಾರತಮ್ಯ ಕೇವಲ ಮೀಸಲಾತಿ ವಿಷಯಕ್ಕೆ ಮಾತ್ರ ಸೀಮಿತವಾಗಿಲ್ಲ. ಇಲಾಖೆಯ ಅನುದಾನ ಹಂಚಿಕೆಯಲ್ಲೂ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವಿಶೇಷವಾಗಿ, ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ನಾಲ್ಕು ವರ್ಷಗಳಿಂದಲೂ ಒಂದೇ ಹುದ್ದೆಯಲ್ಲಿ ಮುಂದುವರಿದಿದ್ದು, ಈ ರೀತಿಯ ತಾರತಮ್ಯದ ನಡೆಗೆ ಸಹಕಾರ ನೀಡುತ್ತಿದ್ದಾರೆ. ಈ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡದಿದ್ದರೆ, ಅವರ ವಿರುದ್ಧ ದೊಡ್ಡ ಪ್ರಮಾಣದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ, ಮುಖ್ಯಮಂತ್ರಿಗಳು ಕೂಡಲೇ ಈ ಮೂವರನ್ನು ತಮ್ಮ ಸ್ಥಾನದಿಂದ ಬದಲಾಯಿಸಿ, ನ್ಯಾಯಯುತ ಆಡಳಿತಕ್ಕೆ ದಾರಿ ಮಾಡಿಕೊಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

22 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

46 mins ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

5 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

5 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

5 hours ago