social welfare office
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ವಜಾತಿ ಪ್ರೇಮದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಒಳಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು, ಇಲಾಖೆಯಲ್ಲಿ 4 ವರ್ಷಗಳಿಂದ ಟಿಕಾಣಿ ಹೂಡಿರುವ ಮೂವರು ಅಧಿಕಾರಿಗಳನ್ನು ಈ ಕೂಡಲೇ ಅವರ ಸ್ಥಾನಗಳಿಂದ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪತ್ರದಲ್ಲಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಶಿವರಾಯ ಅಕ್ಷರಕಿ ಅವರು, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸರಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮತ್ತು ಸಮಾಜ ಕಲ್ಯಾಣ ಆಯುಕ್ತ ರಾಕೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಳಮೀಸಲಾತಿ ವರ್ಗೀಕರಣ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಈ ಅಧಿಕಾರಿಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಅನುಕೂಲವಾಗುವಂತೆ ನಡೆದುಕೊಂಡಿದ್ದಾರೆ. ಸುಮಾರು 35 ವರ್ಷಗಳ ಮಾದಿಗ ಸಮುದಾಯದ ಹೋರಾಟವನ್ನು ಸಂಪೂರ್ಣವಾಗಿ ಕಡೆಗಣಿಸಿ, ಅವರನ್ನು ಮೂಲೆಗುಂಪು ಮಾಡುವ ರೀತಿಯಲ್ಲಿ ನಡೆದುಕೊಂಡಿರುವುದು ಖಂಡನೀಯ ಎಂದು ಪತ್ರದಲ್ಲಿ ಹೇಳಿದ್ದಾರೆ.
ಸಮಾಜ ಕಲ್ಯಾಣ ಸಚಿವರಾದ ಡಾ. ಮಹದೇವಪ್ಪ ಅವರು, ಇಲಾಖೆಯ ಮುಖ್ಯಸ್ಥರಾಗಿ ಎಲ್ಲಾ ಜಾತಿಗಳಿಗೆ ಸಮಾನ ನ್ಯಾಯ ಒದಗಿಸುವ ಬದಲು, ಕೇವಲ ಒಂದು ಸಮುದಾಯದ ಪ್ರತಿನಿಧಿಗಳಂತೆ ವರ್ತಿಸಿದ್ದಾರೆ. ಸರಕಾರದ ಆದೇಶ ಹೊರಡಿಸುವಾಗಲೂ, ಮಾದಿಗ ಸಮುದಾಯವನ್ನು ‘ಬಿ’ ಗುಂಪಿನಲ್ಲಿ ಸೇರ್ಪಡೆ ಮಾಡಿ ಗೊಂದಲ ಮೂಡಿಸಿದ್ದಾರೆ. ಆದಿ ಆಂಧ್ರ ಮತ್ತು ಆದಿ ಕರ್ನಾಟಕ ಸಮುದಾಯಗಳನ್ನು ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಸೇರಿಸುವ ಜವಾಬ್ದಾರಿಯನ್ನು ಹೊರತುಪಡಿಸಿ, ಪಕ್ಷಪಾತದಿಂದ ನಡೆದುಕೊಂಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿರುವ ಈ ತಾರತಮ್ಯ ಕೇವಲ ಮೀಸಲಾತಿ ವಿಷಯಕ್ಕೆ ಮಾತ್ರ ಸೀಮಿತವಾಗಿಲ್ಲ. ಇಲಾಖೆಯ ಅನುದಾನ ಹಂಚಿಕೆಯಲ್ಲೂ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವಿಶೇಷವಾಗಿ, ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ನಾಲ್ಕು ವರ್ಷಗಳಿಂದಲೂ ಒಂದೇ ಹುದ್ದೆಯಲ್ಲಿ ಮುಂದುವರಿದಿದ್ದು, ಈ ರೀತಿಯ ತಾರತಮ್ಯದ ನಡೆಗೆ ಸಹಕಾರ ನೀಡುತ್ತಿದ್ದಾರೆ. ಈ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡದಿದ್ದರೆ, ಅವರ ವಿರುದ್ಧ ದೊಡ್ಡ ಪ್ರಮಾಣದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ, ಮುಖ್ಯಮಂತ್ರಿಗಳು ಕೂಡಲೇ ಈ ಮೂವರನ್ನು ತಮ್ಮ ಸ್ಥಾನದಿಂದ ಬದಲಾಯಿಸಿ, ನ್ಯಾಯಯುತ ಆಡಳಿತಕ್ಕೆ ದಾರಿ ಮಾಡಿಕೊಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…