ರಾಜ್ಯ

ಪಿಎಸ್‌ಐ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಿ: ಆರ್‌.ಅಶೋಕ್‌ ಆಗ್ರಹ

ಯಾದಗಿರಿ: ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯದ ಕಾಂಗ್ರೆಸ್‌ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರು.

ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಭೇಟಿ ನೀಡಿ ಮೃತ ಪರಶುರಾಮ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ವಾಲ್ಮೀಕಿ ನಿಗಮದ ಚಂದ್ರಶೇಖರ್‌ ನಂತರ ಈಗ ಪಿಎಸ್‌ಐ ಪರಶುರಾಮ್‌ ಸಾವಾಗಿದೆ. ನಮ್ಮ ಕ್ಷೇತ್ರದಲ್ಲಿ ದಲಿತರು ಇರಬಾರದು ಎಂದು ಯಾದಗಿರಿ ಶಾಸಕರು ಹೇಳಿದ್ದಾರೆಂದು ಪರಶುರಾಮ್‌ ಕುಟುಂಬ ಆರೋಪಿಸಿದೆ. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿಯೇ ನಾವೆಲ್ಲರೂ ಬದುಕುತ್ತಿದ್ದರೂ ಈ ರೀತಿಯ ಹೇಯ ಕೃತ್ಯ ನಡೆಯುತ್ತಿದೆ ಎಂದು ಬೇಸರಿಸಿದರು.

ದಲಿತ ಕುಟುಂಬದ ಹೆಣ್ಣುಮಗಳಿಗೆ (ಪರಶುರಾಮ್‌ ಪತ್ನಿ) ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹಾಲಪ್ಪ ಆಚಾರ್, ರಾಜ್ಯ ಉಪಾಧ್ಯಕ್ಷರಾದ ರಾಜು ಗೌಡ, ವಿಧಾನ ಸಭಾ ವಿರೋಧ ಪಕ್ಷ ಮುಖ್ಯ ಸಚೇತಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

9 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

10 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

10 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

10 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

10 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

10 hours ago