ಯಾದಗಿರಿ: ಯಾದಗಿರಿ ಠಾಣೆ ಪಿಎಸ್ಐ ಪರಶುರಾಮ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರು.
ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಭೇಟಿ ನೀಡಿ ಮೃತ ಪರಶುರಾಮ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ವಾಲ್ಮೀಕಿ ನಿಗಮದ ಚಂದ್ರಶೇಖರ್ ನಂತರ ಈಗ ಪಿಎಸ್ಐ ಪರಶುರಾಮ್ ಸಾವಾಗಿದೆ. ನಮ್ಮ ಕ್ಷೇತ್ರದಲ್ಲಿ ದಲಿತರು ಇರಬಾರದು ಎಂದು ಯಾದಗಿರಿ ಶಾಸಕರು ಹೇಳಿದ್ದಾರೆಂದು ಪರಶುರಾಮ್ ಕುಟುಂಬ ಆರೋಪಿಸಿದೆ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿಯೇ ನಾವೆಲ್ಲರೂ ಬದುಕುತ್ತಿದ್ದರೂ ಈ ರೀತಿಯ ಹೇಯ ಕೃತ್ಯ ನಡೆಯುತ್ತಿದೆ ಎಂದು ಬೇಸರಿಸಿದರು.
ದಲಿತ ಕುಟುಂಬದ ಹೆಣ್ಣುಮಗಳಿಗೆ (ಪರಶುರಾಮ್ ಪತ್ನಿ) ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹಾಲಪ್ಪ ಆಚಾರ್, ರಾಜ್ಯ ಉಪಾಧ್ಯಕ್ಷರಾದ ರಾಜು ಗೌಡ, ವಿಧಾನ ಸಭಾ ವಿರೋಧ ಪಕ್ಷ ಮುಖ್ಯ ಸಚೇತಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…