ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…