ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…