ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…