ರಾಜ್ಯ

‘ಹೆಚ್‌ಎಸ್‌ಆರ್‌ಪಿ’ ನಂಬರ್‌ ಪ್ಲೇಟ್‌ ಇಲ್ಲದಿದ್ದರೆ ಫೆಬ್ರವರಿ 17ರಿಂದ ದಂಡ ಫಿಕ್ಸ್

2019ರ ಏಪ್ರಿಲ್‌ 1ಕ್ಕಿಂತ ಮುಂಚೆ ನೋಂದಣಿಯಾದ ಎಲ್ಲಾ ವಾಹನಗಳಿಗೂ ಹೆಚ್‌ಎಸ್‌ಆರ್‌ಪಿ ( ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ) ಹಾಕಿಸುವುದು ಕಡ್ಡಾಯ ಎಂದು ಈ ಹಿಂದೆಯೇ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಗಡುವು ನೀಡಿತ್ತು.

ಈ ಗಡುವು ಸನಿಹಕ್ಕೆ ಬಂದಿದ್ದರೂ ಸಹ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಹಾಕಿಸಿಕೊಳ್ಳಲು ಮುಂದಾಗದ ಕಾರಣ ಇದೀಗ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಗಡುವು ದಿನಾಂಕ ಮುಗಿದ ನಂತರವೂ ನಂಬರ್‌ ಪ್ಲೇಟ್‌ ಬದಲಾಯಿಸದೇ ವಾಹನ ಚಲಾವಣೆ ಮಾಡುವಾಗ ಸಿಕ್ಕಿಬಿದ್ದರೆ ದಂಡ ಪಾವತಿಸಲೇಬೇಕಾಗಲಿದೆ. ಮೊದಲ ಬಾರಿಗೆ ಸಿಕ್ಕಿ ಬಿದ್ದರೆ 1000, ಎರಡನೇ ಬಾರಿ ಸಿಕ್ಕಿ ಬಿದ್ದರೆ 2000 ದಂಡ ವಿಧಿಸಲಾಗುತ್ತದೆ.

ಮೊದಲಿಗೆ ಹೆಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯವಾಗಿ ಅಳವಡಿಸಲು 2023ರ ನವೆಂಬರ್‌ 17 ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ ಇದಕ್ಕೆ ವಾಹನ ಮಾಲೀಕರು ಹೆಚ್ಚಿನ ಆಸಕ್ತಿ ತೋರದ ಕಾರಣ ಗಡುವು ದಿನಾಂಕವನ್ನು ಈ ಫೆಬ್ರವರಿ 17ಕ್ಕೆ ವಿಸ್ತರಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಕೇವಲ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್‌ ಮಲ್ಲಿಕಾರ್ಜುನ ತಿಳಿಸಿದ್ದಾರೆ.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago