ರಾಜ್ಯ

‘ಹೆಚ್‌ಎಸ್‌ಆರ್‌ಪಿ’ ನಂಬರ್‌ ಪ್ಲೇಟ್‌ ಇಲ್ಲದಿದ್ದರೆ ಫೆಬ್ರವರಿ 17ರಿಂದ ದಂಡ ಫಿಕ್ಸ್

2019ರ ಏಪ್ರಿಲ್‌ 1ಕ್ಕಿಂತ ಮುಂಚೆ ನೋಂದಣಿಯಾದ ಎಲ್ಲಾ ವಾಹನಗಳಿಗೂ ಹೆಚ್‌ಎಸ್‌ಆರ್‌ಪಿ ( ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ) ಹಾಕಿಸುವುದು ಕಡ್ಡಾಯ ಎಂದು ಈ ಹಿಂದೆಯೇ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಗಡುವು ನೀಡಿತ್ತು.

ಈ ಗಡುವು ಸನಿಹಕ್ಕೆ ಬಂದಿದ್ದರೂ ಸಹ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಹಾಕಿಸಿಕೊಳ್ಳಲು ಮುಂದಾಗದ ಕಾರಣ ಇದೀಗ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಗಡುವು ದಿನಾಂಕ ಮುಗಿದ ನಂತರವೂ ನಂಬರ್‌ ಪ್ಲೇಟ್‌ ಬದಲಾಯಿಸದೇ ವಾಹನ ಚಲಾವಣೆ ಮಾಡುವಾಗ ಸಿಕ್ಕಿಬಿದ್ದರೆ ದಂಡ ಪಾವತಿಸಲೇಬೇಕಾಗಲಿದೆ. ಮೊದಲ ಬಾರಿಗೆ ಸಿಕ್ಕಿ ಬಿದ್ದರೆ 1000, ಎರಡನೇ ಬಾರಿ ಸಿಕ್ಕಿ ಬಿದ್ದರೆ 2000 ದಂಡ ವಿಧಿಸಲಾಗುತ್ತದೆ.

ಮೊದಲಿಗೆ ಹೆಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯವಾಗಿ ಅಳವಡಿಸಲು 2023ರ ನವೆಂಬರ್‌ 17 ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ ಇದಕ್ಕೆ ವಾಹನ ಮಾಲೀಕರು ಹೆಚ್ಚಿನ ಆಸಕ್ತಿ ತೋರದ ಕಾರಣ ಗಡುವು ದಿನಾಂಕವನ್ನು ಈ ಫೆಬ್ರವರಿ 17ಕ್ಕೆ ವಿಸ್ತರಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಕೇವಲ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್‌ ಮಲ್ಲಿಕಾರ್ಜುನ ತಿಳಿಸಿದ್ದಾರೆ.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

7 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

8 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

10 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

11 hours ago