2019ರ ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ಎಲ್ಲಾ ವಾಹನಗಳಿಗೂ ಹೆಚ್ಎಸ್ಆರ್ಪಿ ( ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಹಾಕಿಸುವುದು ಕಡ್ಡಾಯ ಎಂದು ಈ ಹಿಂದೆಯೇ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಗಡುವು ನೀಡಿತ್ತು.
ಈ ಗಡುವು ಸನಿಹಕ್ಕೆ ಬಂದಿದ್ದರೂ ಸಹ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ಗಳನ್ನು ಹಾಕಿಸಿಕೊಳ್ಳಲು ಮುಂದಾಗದ ಕಾರಣ ಇದೀಗ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಗಡುವು ದಿನಾಂಕ ಮುಗಿದ ನಂತರವೂ ನಂಬರ್ ಪ್ಲೇಟ್ ಬದಲಾಯಿಸದೇ ವಾಹನ ಚಲಾವಣೆ ಮಾಡುವಾಗ ಸಿಕ್ಕಿಬಿದ್ದರೆ ದಂಡ ಪಾವತಿಸಲೇಬೇಕಾಗಲಿದೆ. ಮೊದಲ ಬಾರಿಗೆ ಸಿಕ್ಕಿ ಬಿದ್ದರೆ 1000, ಎರಡನೇ ಬಾರಿ ಸಿಕ್ಕಿ ಬಿದ್ದರೆ 2000 ದಂಡ ವಿಧಿಸಲಾಗುತ್ತದೆ.
ಮೊದಲಿಗೆ ಹೆಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯವಾಗಿ ಅಳವಡಿಸಲು 2023ರ ನವೆಂಬರ್ 17 ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ ಇದಕ್ಕೆ ವಾಹನ ಮಾಲೀಕರು ಹೆಚ್ಚಿನ ಆಸಕ್ತಿ ತೋರದ ಕಾರಣ ಗಡುವು ದಿನಾಂಕವನ್ನು ಈ ಫೆಬ್ರವರಿ 17ಕ್ಕೆ ವಿಸ್ತರಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಕೇವಲ 10 ಲಕ್ಷ ವಾಹನಗಳಿಗಷ್ಟೇ ಹೆಚ್ಎಸ್ಆರ್ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…