big shocking for ksrtc transport unions
ಬೆಂಗಳೂರು: ಕೆಎಸ್ಆರ್ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್ಆರ್ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.
ಕೆಎಸ್ಆರ್ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಇದನ್ನು ಓದಿ: ಕೆಎಸ್ಆರ್ಟಿಸಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ
ಹೀಗಾಗಿ ಆಡಳಿತದ ದೃಷ್ಟಿಯಿಂದ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಒಂದೇ ಶಾಖೆ ಅಥವಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು.
ಇದರೊಂದಿಗೆ ನಿಗಮಗಳಲ್ಲಿ ಚಾಲ್ತಿಯಲ್ಲಿರುವ ಸುತ್ತೋಲೆ, ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಆಡಳಿತ ವರ್ಗವನ್ನು ಚುರುಕುಗೊಳಿಸಲು ಕ್ರಮ ವಹಿಸಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…