ರಾಜ್ಯ

3 ವರ್ಷಕ್ಕಿಂತ ಹೆಚ್ಚಿನ ಅವಧಿ ಒಂದೇ ಕಡೆ ಇರುವ ನೌಕರರ ವರ್ಗಾವಣೆಗೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

ಕೆಎಸ್‌ಆರ್‌ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಇದನ್ನು ಓದಿ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಅಪಘಾತ

ಹೀಗಾಗಿ ಆಡಳಿತದ ದೃಷ್ಟಿಯಿಂದ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಒಂದೇ ಶಾಖೆ ಅಥವಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು.

ಇದರೊಂದಿಗೆ ನಿಗಮಗಳಲ್ಲಿ ಚಾಲ್ತಿಯಲ್ಲಿರುವ ಸುತ್ತೋಲೆ, ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಆಡಳಿತ ವರ್ಗವನ್ನು ಚುರುಕುಗೊಳಿಸಲು ಕ್ರಮ ವಹಿಸಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

16 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

16 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

16 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

16 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

16 hours ago