ರಾಜ್ಯ

ಕೆಜಿಎಫ್‌ ಬಾಬು ಮನೆ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿ: ಕಾರಣ ಇಷ್ಟೇ

ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ. ಕೆಜಿಎಫ್ ಬಾಬು ಬಳಿ ಎರಡು ರೋಲ್ಸ್ ರಾಯ್ಸ್ ಕಾರಿದೆ. ಅಮಿತಾಭ್ ಬಚ್ಚನ್ ಹಾಗೂ ಆಮಿರ್ ಖಾನ್ ಒಂದು ವರ್ಷ ಮಾತ್ರ ಬಳಸಿದ್ದ ಕಾರನ್ನು ಕೆಜಿಎಫ್ ಬಾಬು ಖರೀದಿಸಿ ತಂದಿದ್ದರು.

ಈಗ ಬಾಬು ತೆರಿಗೆ ಕಟ್ಟದ ಕಾರಣ ಆರ್‌ಟಿಓ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ಬಾಬು ಮನೆಯ ಮೇಲೆ ದಾಳಿ ನಡೆಸಿತು. ಈ ವೇಳೆ ಗೇಟ್ ತೆಗೆಯದೆ ಕೆಜಿಎಫ್ ಬಾಬು ಮೊಂಡಾಟ ಪ್ರದರ್ಶಿಸಿದರು.

ಅಮಿತಾಬ್‌ ಬಚ್ಚನ್‍ರವರಿಂದ 2019ರಲ್ಲಿ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ಗೆ ಉತ್ಪಾದಕ ಸಂಸ್ಥೆಯ ಇನ್ವಾಯ್ಸ್ ಲಭ್ಯವಿಲ್ಲ ಎನ್ನಲಾಗಿದೆ. ಅಮಿರ್‌ ಖಾನ್‌ರಿಂದ 2 ವರ್ಷಗಳ ಹಿಂದೆ ಇನ್ನೊಂದು ರೋಲ್ಸ್ ರಾಯ್ಸ್ ಅನ್ನು ಖರೀದಿಸಿದ್ದಾರೆ. ಈ ಎರಡೂ ಕಾರುಗಳು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿವೆ. ಹೀಗಾಗಿ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಕೆಜಿಎಫ್ ಬಾಬು ಅವರ ಮನೆಗೆ ದಾಳಿ ಮಾಡಿದರು. ವಾಹನಗಳನ್ನು ಜಪ್ತಿ ಮಾಡಲು ಮುಂದಾದಾಗ ಕೆಜಿಎಫ್ ಬಾಬು ವಿರೋಧ ವ್ಯಕ್ತಪಡಿಸಿದ್ದಾರೆ.

ಎರಡು ವಾಹನಗಳನ್ನೂ ಮಹಾರಾಷ್ಟ್ರದಲ್ಲಿರುವ ನಮ್ಮ ಕಚೇರಿ ಮೂಲಕ ಮುಂಬೈನಲ್ಲೇ ನೋಂದಣಿ ಮಾಡಿಸಿದ್ದೇನೆ. ಅಲ್ಲಿ 15 ದಿನ, ಇಲ್ಲಿ 15 ದಿನ ವಾಹನಗಳು ಸಂಚರಿಸುತ್ತವೆ. ಕರ್ನಾಟಕ ರಾಜ್ಯದಲ್ಲೂ ತೆರಿಗೆ ಪಾವತಿಸಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೋಟೀಸ್ ಕೊಟ್ಟರೆ ತಕ್ಷಣ ತಾವು ತೆರಿಗೆ ಪಾವತಿಸಲು ಸಿದ್ಧರಿರುವುದಾಗಿ ಕೆಜಿಎಫ್ ಬಾಬು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಶೋಭಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಕೊನೆಗೆ ಕೆಜಿಎಫ್ ಬಾಬು ಅವರು ಅಮಿತಾಬ್‌ ಬಚ್ಚನ್ ಅವರಿಂದ ಖರೀದಿಸಿದ ಕಾರಿಗೆ 19 ಲಕ್ಷದ 73 ಸಾವಿರ ರೂ, ಅಮೀರ್‌ಖಾನ್‌ರಿಂದ ಖರೀದಿಸಿದ ಕಾರಿಗೆ 18 ಲಕ್ಷದ 53 ಸಾವಿರ ರೂ. ಗಳ ತೆರಿಗೆಯನ್ನು ಡಿಡಿ ಮೂಲಕ ಪಾವತಿಸಿದರು. ಕೊನೆಗೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೆಜಿಎಫ್ ಬಾಬು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

9 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

9 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

12 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago