ರಾಜ್ಯ

ಕೆಜಿಎಫ್‌ ಬಾಬು ಮನೆ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿ: ಕಾರಣ ಇಷ್ಟೇ

ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ. ಕೆಜಿಎಫ್ ಬಾಬು ಬಳಿ ಎರಡು ರೋಲ್ಸ್ ರಾಯ್ಸ್ ಕಾರಿದೆ. ಅಮಿತಾಭ್ ಬಚ್ಚನ್ ಹಾಗೂ ಆಮಿರ್ ಖಾನ್ ಒಂದು ವರ್ಷ ಮಾತ್ರ ಬಳಸಿದ್ದ ಕಾರನ್ನು ಕೆಜಿಎಫ್ ಬಾಬು ಖರೀದಿಸಿ ತಂದಿದ್ದರು.

ಈಗ ಬಾಬು ತೆರಿಗೆ ಕಟ್ಟದ ಕಾರಣ ಆರ್‌ಟಿಓ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ಬಾಬು ಮನೆಯ ಮೇಲೆ ದಾಳಿ ನಡೆಸಿತು. ಈ ವೇಳೆ ಗೇಟ್ ತೆಗೆಯದೆ ಕೆಜಿಎಫ್ ಬಾಬು ಮೊಂಡಾಟ ಪ್ರದರ್ಶಿಸಿದರು.

ಅಮಿತಾಬ್‌ ಬಚ್ಚನ್‍ರವರಿಂದ 2019ರಲ್ಲಿ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ಗೆ ಉತ್ಪಾದಕ ಸಂಸ್ಥೆಯ ಇನ್ವಾಯ್ಸ್ ಲಭ್ಯವಿಲ್ಲ ಎನ್ನಲಾಗಿದೆ. ಅಮಿರ್‌ ಖಾನ್‌ರಿಂದ 2 ವರ್ಷಗಳ ಹಿಂದೆ ಇನ್ನೊಂದು ರೋಲ್ಸ್ ರಾಯ್ಸ್ ಅನ್ನು ಖರೀದಿಸಿದ್ದಾರೆ. ಈ ಎರಡೂ ಕಾರುಗಳು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿವೆ. ಹೀಗಾಗಿ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಕೆಜಿಎಫ್ ಬಾಬು ಅವರ ಮನೆಗೆ ದಾಳಿ ಮಾಡಿದರು. ವಾಹನಗಳನ್ನು ಜಪ್ತಿ ಮಾಡಲು ಮುಂದಾದಾಗ ಕೆಜಿಎಫ್ ಬಾಬು ವಿರೋಧ ವ್ಯಕ್ತಪಡಿಸಿದ್ದಾರೆ.

ಎರಡು ವಾಹನಗಳನ್ನೂ ಮಹಾರಾಷ್ಟ್ರದಲ್ಲಿರುವ ನಮ್ಮ ಕಚೇರಿ ಮೂಲಕ ಮುಂಬೈನಲ್ಲೇ ನೋಂದಣಿ ಮಾಡಿಸಿದ್ದೇನೆ. ಅಲ್ಲಿ 15 ದಿನ, ಇಲ್ಲಿ 15 ದಿನ ವಾಹನಗಳು ಸಂಚರಿಸುತ್ತವೆ. ಕರ್ನಾಟಕ ರಾಜ್ಯದಲ್ಲೂ ತೆರಿಗೆ ಪಾವತಿಸಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೋಟೀಸ್ ಕೊಟ್ಟರೆ ತಕ್ಷಣ ತಾವು ತೆರಿಗೆ ಪಾವತಿಸಲು ಸಿದ್ಧರಿರುವುದಾಗಿ ಕೆಜಿಎಫ್ ಬಾಬು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಶೋಭಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಕೊನೆಗೆ ಕೆಜಿಎಫ್ ಬಾಬು ಅವರು ಅಮಿತಾಬ್‌ ಬಚ್ಚನ್ ಅವರಿಂದ ಖರೀದಿಸಿದ ಕಾರಿಗೆ 19 ಲಕ್ಷದ 73 ಸಾವಿರ ರೂ, ಅಮೀರ್‌ಖಾನ್‌ರಿಂದ ಖರೀದಿಸಿದ ಕಾರಿಗೆ 18 ಲಕ್ಷದ 53 ಸಾವಿರ ರೂ. ಗಳ ತೆರಿಗೆಯನ್ನು ಡಿಡಿ ಮೂಲಕ ಪಾವತಿಸಿದರು. ಕೊನೆಗೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೆಜಿಎಫ್ ಬಾಬು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

4 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

19 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago