ರಾಜ್ಯ

ಕೆಜಿಎಫ್‌ ಬಾಬು ಮನೆ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿ: ಕಾರಣ ಇಷ್ಟೇ

ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ. ಕೆಜಿಎಫ್ ಬಾಬು ಬಳಿ ಎರಡು ರೋಲ್ಸ್ ರಾಯ್ಸ್ ಕಾರಿದೆ. ಅಮಿತಾಭ್ ಬಚ್ಚನ್ ಹಾಗೂ ಆಮಿರ್ ಖಾನ್ ಒಂದು ವರ್ಷ ಮಾತ್ರ ಬಳಸಿದ್ದ ಕಾರನ್ನು ಕೆಜಿಎಫ್ ಬಾಬು ಖರೀದಿಸಿ ತಂದಿದ್ದರು.

ಈಗ ಬಾಬು ತೆರಿಗೆ ಕಟ್ಟದ ಕಾರಣ ಆರ್‌ಟಿಓ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ಬಾಬು ಮನೆಯ ಮೇಲೆ ದಾಳಿ ನಡೆಸಿತು. ಈ ವೇಳೆ ಗೇಟ್ ತೆಗೆಯದೆ ಕೆಜಿಎಫ್ ಬಾಬು ಮೊಂಡಾಟ ಪ್ರದರ್ಶಿಸಿದರು.

ಅಮಿತಾಬ್‌ ಬಚ್ಚನ್‍ರವರಿಂದ 2019ರಲ್ಲಿ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ಗೆ ಉತ್ಪಾದಕ ಸಂಸ್ಥೆಯ ಇನ್ವಾಯ್ಸ್ ಲಭ್ಯವಿಲ್ಲ ಎನ್ನಲಾಗಿದೆ. ಅಮಿರ್‌ ಖಾನ್‌ರಿಂದ 2 ವರ್ಷಗಳ ಹಿಂದೆ ಇನ್ನೊಂದು ರೋಲ್ಸ್ ರಾಯ್ಸ್ ಅನ್ನು ಖರೀದಿಸಿದ್ದಾರೆ. ಈ ಎರಡೂ ಕಾರುಗಳು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿವೆ. ಹೀಗಾಗಿ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಕೆಜಿಎಫ್ ಬಾಬು ಅವರ ಮನೆಗೆ ದಾಳಿ ಮಾಡಿದರು. ವಾಹನಗಳನ್ನು ಜಪ್ತಿ ಮಾಡಲು ಮುಂದಾದಾಗ ಕೆಜಿಎಫ್ ಬಾಬು ವಿರೋಧ ವ್ಯಕ್ತಪಡಿಸಿದ್ದಾರೆ.

ಎರಡು ವಾಹನಗಳನ್ನೂ ಮಹಾರಾಷ್ಟ್ರದಲ್ಲಿರುವ ನಮ್ಮ ಕಚೇರಿ ಮೂಲಕ ಮುಂಬೈನಲ್ಲೇ ನೋಂದಣಿ ಮಾಡಿಸಿದ್ದೇನೆ. ಅಲ್ಲಿ 15 ದಿನ, ಇಲ್ಲಿ 15 ದಿನ ವಾಹನಗಳು ಸಂಚರಿಸುತ್ತವೆ. ಕರ್ನಾಟಕ ರಾಜ್ಯದಲ್ಲೂ ತೆರಿಗೆ ಪಾವತಿಸಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೋಟೀಸ್ ಕೊಟ್ಟರೆ ತಕ್ಷಣ ತಾವು ತೆರಿಗೆ ಪಾವತಿಸಲು ಸಿದ್ಧರಿರುವುದಾಗಿ ಕೆಜಿಎಫ್ ಬಾಬು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಶೋಭಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಕೊನೆಗೆ ಕೆಜಿಎಫ್ ಬಾಬು ಅವರು ಅಮಿತಾಬ್‌ ಬಚ್ಚನ್ ಅವರಿಂದ ಖರೀದಿಸಿದ ಕಾರಿಗೆ 19 ಲಕ್ಷದ 73 ಸಾವಿರ ರೂ, ಅಮೀರ್‌ಖಾನ್‌ರಿಂದ ಖರೀದಿಸಿದ ಕಾರಿಗೆ 18 ಲಕ್ಷದ 53 ಸಾವಿರ ರೂ. ಗಳ ತೆರಿಗೆಯನ್ನು ಡಿಡಿ ಮೂಲಕ ಪಾವತಿಸಿದರು. ಕೊನೆಗೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೆಜಿಎಫ್ ಬಾಬು ಶ್ಲಾಘಿಸಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 hours ago