ರಾಜ್ಯ

ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ: ಬಸ್‌ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ.

ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನು ಕಡ್ಡಾಯಗೊಳಿಸಲು ಸೂಚನೆ ನೀಡಿದ್ದಾರೆ.

ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್‌ ಹಾಕಲಾಗುತ್ತದೆ. ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಎಲ್ಲಾ ಎಸಿ ಬಸ್‌ಗಳಲ್ಲಿ ಇನ್ನು ಮುಂದೆ ಸುತ್ತಿಗೆ ಕಡ್ಡಾಯಗೊಳಿಸಲಾಗಿದೆ. ಲಗೇಜ್‌ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ಇಲ್ಲ ಎಂದು ಸೂಚನೆ ನೀಡಿದ್ದಾರೆ.

ಜೊತೆಗೆ ಬಸ್ಸುಗಳಲ್ಲಿ ಸುರಕ್ಷತಾ ಆಡಿಟ್‌ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್‌ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮದ ಆದೇಶಕ್ಕೆ ಸೂಚನೆ ನೀಡಲಾಗಿದೆ.

ಇದರ ನಡುವೆ ನಿನ್ನೆ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್‌ ಪೊಲೀಸರು ಬೆಂಗಳೂರಿನಿಂದ ಹೋಗುವಂತಹ ಎಲ್ಲಾ ಬಸ್ಸುಗಳನ್ನು ಪರಿಶೀಲನೆಗೆ ಮುಂದಾಗಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಖಾಸಗಿ ಎಸಿ ಬಸ್‌ಗಳ ಪರಿಶೀಲನೆ ನಡೆಸಿ, ಡ್ರೈವರ್‌ ಲೈಸೆನ್ಸ್‌, ಬಸ್‌ಗಳ ದಾಖಲೆ ಚೆಕ್‌ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

10 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

10 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

10 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago