ರಾಜ್ಯ

ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ: ಬಸ್‌ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ.

ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನು ಕಡ್ಡಾಯಗೊಳಿಸಲು ಸೂಚನೆ ನೀಡಿದ್ದಾರೆ.

ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್‌ ಹಾಕಲಾಗುತ್ತದೆ. ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಎಲ್ಲಾ ಎಸಿ ಬಸ್‌ಗಳಲ್ಲಿ ಇನ್ನು ಮುಂದೆ ಸುತ್ತಿಗೆ ಕಡ್ಡಾಯಗೊಳಿಸಲಾಗಿದೆ. ಲಗೇಜ್‌ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ಇಲ್ಲ ಎಂದು ಸೂಚನೆ ನೀಡಿದ್ದಾರೆ.

ಜೊತೆಗೆ ಬಸ್ಸುಗಳಲ್ಲಿ ಸುರಕ್ಷತಾ ಆಡಿಟ್‌ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್‌ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮದ ಆದೇಶಕ್ಕೆ ಸೂಚನೆ ನೀಡಲಾಗಿದೆ.

ಇದರ ನಡುವೆ ನಿನ್ನೆ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್‌ ಪೊಲೀಸರು ಬೆಂಗಳೂರಿನಿಂದ ಹೋಗುವಂತಹ ಎಲ್ಲಾ ಬಸ್ಸುಗಳನ್ನು ಪರಿಶೀಲನೆಗೆ ಮುಂದಾಗಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಖಾಸಗಿ ಎಸಿ ಬಸ್‌ಗಳ ಪರಿಶೀಲನೆ ನಡೆಸಿ, ಡ್ರೈವರ್‌ ಲೈಸೆನ್ಸ್‌, ಬಸ್‌ಗಳ ದಾಖಲೆ ಚೆಕ್‌ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago