ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್ಗಳಲ್ಲಿ ಕೆಲ ನಿಯಮಗಳನ್ನು ಕಡ್ಡಾಯಗೊಳಿಸಲು ಸೂಚನೆ ನೀಡಿದ್ದಾರೆ.
ಬಸ್ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್ ಹಾಕಲಾಗುತ್ತದೆ. ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಎಲ್ಲಾ ಎಸಿ ಬಸ್ಗಳಲ್ಲಿ ಇನ್ನು ಮುಂದೆ ಸುತ್ತಿಗೆ ಕಡ್ಡಾಯಗೊಳಿಸಲಾಗಿದೆ. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ಇಲ್ಲ ಎಂದು ಸೂಚನೆ ನೀಡಿದ್ದಾರೆ.
ಜೊತೆಗೆ ಬಸ್ಸುಗಳಲ್ಲಿ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮದ ಆದೇಶಕ್ಕೆ ಸೂಚನೆ ನೀಡಲಾಗಿದೆ.
ಇದರ ನಡುವೆ ನಿನ್ನೆ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸರು ಬೆಂಗಳೂರಿನಿಂದ ಹೋಗುವಂತಹ ಎಲ್ಲಾ ಬಸ್ಸುಗಳನ್ನು ಪರಿಶೀಲನೆಗೆ ಮುಂದಾಗಿದ್ದಾರೆ. ಮೆಜೆಸ್ಟಿಕ್ನಲ್ಲಿ ಖಾಸಗಿ ಎಸಿ ಬಸ್ಗಳ ಪರಿಶೀಲನೆ ನಡೆಸಿ, ಡ್ರೈವರ್ ಲೈಸೆನ್ಸ್, ಬಸ್ಗಳ ದಾಖಲೆ ಚೆಕ್ ಮಾಡುತ್ತಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…