ರಾಜ್ಯ

ಸರ್ಕಾರಕ್ಕೆ ಡೆಡ್‌ಲೈನ್‌ ನೀಡಿ ಮುಷ್ಕರ ವಾಪಾಸ್‌ ಪಡೆದ ಸಾರಿಗೆ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ ವ್ಯತ್ಯಯ ಉಂಟಾಗಬಹುದೆಂಬ ಆತಂಕದಲ್ಲಿದ್ದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ.

38ತಿಂಗಳ ವೇತನ ಹಿಂಬಾಕಿ ಬಿಡುಗಡೆ ಸೇರಿದಂತೆ ಕೆಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಎಸ್ಆರ್‌ಟಿಸಿ, ವಾಯುವ್ಯ, ಈಶಾನ್ಯ ಮತ್ತು ಬಿಎಂಟಿಸಿ ಸೇರಿದಂತೆ ಒಟ್ಟು ನಾಲ್ಕು ನಿಗಮಗಳ ಸಾರಿಗೆ ನೌಕರರು ಶುಕ್ರವಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದ್ದರು. ಗುರುವಾರ ಸಾರಿಗೆ ನೌಕರರು ಹಾಗೂ ವಿವಿಧ ಸಾರಿಗೆ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೊನೆಗೆ ಸರ್ಕಾರದ ಪರವಾಗಿ ಮಧ್ಯಪ್ರವೇಶ ಮಾಡಿದ ಸಾರಿಗೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಶ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ದಿನಪೂರ್ತಿ ನಡೆಸಿದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಾರ್ಚ್ 2ರ ವರೆಗೆ ಪ್ರತಿಭಟನೆಯನ್ನು ಮುಂದೂಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು.

ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಮುಷ್ಕರವನ್ನು ಕೈಬಿಟ್ಟು ಭರವಸೆ ಈಡೇರಿಕೆಗೆ ಮಾರ್ಚ್‌ 2ರ ಹೊಸಗಡುವು ನೀಡಲಾಗಿದೆ. ಅಷ್ಟರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿಯೂ ಕ್ರಿಯಾ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಬಳಿಕ ವೇದಿಕೆ ಮೇಲೆ ತೀರ್ಮಾನ ಪ್ರಕಟಿಸಿದ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜ್ ಅರಸ್, ನಮ್ಮ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರ ಸ್ಪಂದಿಸಿದೆ. ಆದರೆ ನಮ್ಮ ಹೋರಾಟ ನಿಲ್ಲುವುದಿಲ್ಲ. 38 ತಿಂಗಳ ಹಿಂಬಾಕಿ ಹಾಗೂ ಎಷ್ಟು ವೇತನ ಹೆಚ್ಚಳ ಮಾಡಬೇಕು ಎಂಬುದರ ಕುರಿತು ಶೀಘ್ರದಲ್ಲಿ ಸಭೆ ಕರೆದು ಇತ್ಯರ್ಥಪಡಿಸಲಾಗುವುದು. ನೌಕರರ ಹಿತದೃಷ್ಟಿಯಿಂದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್​​ 2ರೊಳಗೆ ಸಭೆ ಕರೆದು ಸಮಸ್ಯೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.

ನೌಕರರಿಂದ ಹೈಡ್ರಾಮಾ
ಜಂಟಿ ಕ್ರಿಯಾ ಸಮಿತಿ ಮುಖಂಡರಿಗೆ ಮುತ್ತಿಗೆ ಹಾಕಿದ ಸಾರಿಗೆ ನೌಕರರು, ಘೋಷಣೆ ಕೂಗಿದರು. ನಿವೃತ್ತ ಸಾರಿಗೆ ನೌಕರರೇ ಪ್ರತಿಭಟನೆಯಲ್ಲಿ ಹೆಚ್ಷಿನ ಸಂಖ್ಯೆಯಲ್ಲಿ‌ ಭಾಗಿಯಾಗಿ, ಮುಖಂಡರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಇನ್ನೆಷ್ಟು ದಿನ ಅವಕಾಶ ಕೊಡ್ತೀರಿ? ಆಗಲ್ಲ ಅದೆಲ್ಲ‌ ಅಗಲ್ಲ ಎಂದು ವಿರೋಧದ ಘೋಷಣೆ ಕೂಗಿದರು.

ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಮಾರ್ಚ್ 2ರವರೆಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಲಾಗಿದೆ. ಅಲ್ಲಿವರೆಗೆ ಬೇಡಿಕೆ ಈಡೇರದಿದ್ದರೆ, ಮಾರ್ಚ್ 2ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳು ಏನು?

  • 38 ತಿಂಗಳ ಹಿಂಬಾಕಿ ಹಣ ಬಿಡುಗಡೆ
  • ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ
  • ಕಾರ್ಮಿಕರ ಕಿರುಕುಳ ನಿಲ್ಲಬೇಕು
  • 1-1-2024 ರಿಂದ ವೇತನ ಜಾರಿಗೊಳಿಸಬೇಕು
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 hours ago