ರಾಜ್ಯ

ವೇತನ ಹಿಂಬಾಕಿಗೆ ಆಗ್ರಹಿಸಿ ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ.

ಕಳೆದ 38 ತಿಂಗಳಿನಿಂದ ವೇತನ ಹಿಂಬಾಕಿ ಬಂದಿಲ್ಲ. ಈ ಬಗ್ಗೆ ಹಲವು ಬಾರಿ ನಾವು ಮನವಿ ಮಾಡಿದರೂ ಅದಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟದ ಹಾದಿ ಹಿಡಿಯಬೇಕಿದೆ ಎಂದು ಕ್ರಿಯಾಸಮಿತಿ ಅಧ್ಯಕ್ಷ ಅನಂತಸುಬ್ಬರಾವ್‌ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈಗಾಗಲೇ ಇನ್ನು ಆರು ತಿಂಗಳ ಕಾಲ ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಪ್ರಸ್ತುತ ಸಾರಿಗೆ ನೌಕರರು ಪ್ರತಿಭಟನೆ ಸಂಬಂಧ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಂ.ಆರ್.ಶ್ರೀನಿವಾಸಮರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ : ವಾರ್ತಾ ಇಲಾಖೆ ಆಯುಕ್ತರ ಜತೆ ಶೀಘ್ರ ಚರ್ಚೆ

ಬೆಂಗಳೂರು : ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ…

22 mins ago

ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ: ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.…

2 hours ago

ಮುಂದುವರಿದ ಹುಲಿ ಸೆರೆ ಕಾರ್ಯಾಚರಣೆ: ಮತ್ತೊಂದು ಹುಲಿ ಮರಿ ಸೆರೆ

ಚಾಮರಾಜನಗರ: ಚಾಮರಾಜನಗರದ ಕಾಡಂಚಿನ ಗ್ರಾಮದಲ್ಲಿ ಹುಲಿ ಸಂಚಾರ ಸಾಕಷ್ಟು ಭೀತಿ ಹುಟ್ಟಿಸಿದ್ದು, ಇದೀಗ ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆಯಾಗಿದೆ.…

3 hours ago

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ…

3 hours ago

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ…

5 hours ago

ಮಂಗನ ಕಾಯಿಲೆ ನಿಯಂತ್ರಣಕ್ಕೆ ಡೆಪಾ ತೈಲ ಖರೀದಿಗೆ ಅನುಮೋದನೆ

ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್‌ಡಿ…

5 hours ago