big shocking for ksrtc transport unions
ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ.
ಕಳೆದ 38 ತಿಂಗಳಿನಿಂದ ವೇತನ ಹಿಂಬಾಕಿ ಬಂದಿಲ್ಲ. ಈ ಬಗ್ಗೆ ಹಲವು ಬಾರಿ ನಾವು ಮನವಿ ಮಾಡಿದರೂ ಅದಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟದ ಹಾದಿ ಹಿಡಿಯಬೇಕಿದೆ ಎಂದು ಕ್ರಿಯಾಸಮಿತಿ ಅಧ್ಯಕ್ಷ ಅನಂತಸುಬ್ಬರಾವ್ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈಗಾಗಲೇ ಇನ್ನು ಆರು ತಿಂಗಳ ಕಾಲ ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಪ್ರಸ್ತುತ ಸಾರಿಗೆ ನೌಕರರು ಪ್ರತಿಭಟನೆ ಸಂಬಂಧ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…