ರಾಜ್ಯ

ಕೆಎಸ್‌ಆರ್‌ಟಿಸಿಯ 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಸಾರಿಗೆ ಸಚಿವ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್‌ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಇನ್ನು ಈ ಹೊಸ ಟ್ರಕ್‌ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್​ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣವನ್ನು ಟ್ರಕ್‌ಗಳ ಕಾರ್ಯಾಚರಣೆ ಮತ್ತು ಡಿಪೋವಾಗಿ ಬಳಸಿಕೊಳ್ಳಲಾಗುವುದು. ಉಳಿದ ಜಾಗವನ್ನು ವಾಣಿಜ್ಯ ಆದಾಯ ಗಳಿಸಲು ಸರ್ಕಾರಿ ಕಂಪೆನಿಗಳಿಗೆ ನೀಡಲಾಗುವುದು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲಾಗುತ್ತಿದ್ದು, ಈ ಆರು ಚಕ್ರದ ಟ್ರಕ್‌ಗಳಲ್ಲಿ 6ಟನ್‌ ಸರಕನ್ನು ಸಾಗಿಸಬಹುದಾಗಿದೆ.

ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಉತ್ತಮ ಪ್ರತಿಕ್ರಿಯೆ ಬಂದರೆ ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಈ ಟ್ರಕ್‌ಗಳು ಆರಂಭದಲ್ಲಿ ಸಾರಿಗೆ ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago