ರಾಜ್ಯ

ಕೆಎಸ್‌ಆರ್‌ಟಿಸಿಯ 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಸಾರಿಗೆ ಸಚಿವ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್‌ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಇನ್ನು ಈ ಹೊಸ ಟ್ರಕ್‌ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್​ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣವನ್ನು ಟ್ರಕ್‌ಗಳ ಕಾರ್ಯಾಚರಣೆ ಮತ್ತು ಡಿಪೋವಾಗಿ ಬಳಸಿಕೊಳ್ಳಲಾಗುವುದು. ಉಳಿದ ಜಾಗವನ್ನು ವಾಣಿಜ್ಯ ಆದಾಯ ಗಳಿಸಲು ಸರ್ಕಾರಿ ಕಂಪೆನಿಗಳಿಗೆ ನೀಡಲಾಗುವುದು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲಾಗುತ್ತಿದ್ದು, ಈ ಆರು ಚಕ್ರದ ಟ್ರಕ್‌ಗಳಲ್ಲಿ 6ಟನ್‌ ಸರಕನ್ನು ಸಾಗಿಸಬಹುದಾಗಿದೆ.

ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಉತ್ತಮ ಪ್ರತಿಕ್ರಿಯೆ ಬಂದರೆ ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಈ ಟ್ರಕ್‌ಗಳು ಆರಂಭದಲ್ಲಿ ಸಾರಿಗೆ ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

2 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

2 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

3 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

3 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

3 hours ago