ರಾಜ್ಯ

ಕೆಎಸ್‌ಆರ್‌ಟಿಸಿಯ 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಸಾರಿಗೆ ಸಚಿವ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್‌ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಇನ್ನು ಈ ಹೊಸ ಟ್ರಕ್‌ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್​ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣವನ್ನು ಟ್ರಕ್‌ಗಳ ಕಾರ್ಯಾಚರಣೆ ಮತ್ತು ಡಿಪೋವಾಗಿ ಬಳಸಿಕೊಳ್ಳಲಾಗುವುದು. ಉಳಿದ ಜಾಗವನ್ನು ವಾಣಿಜ್ಯ ಆದಾಯ ಗಳಿಸಲು ಸರ್ಕಾರಿ ಕಂಪೆನಿಗಳಿಗೆ ನೀಡಲಾಗುವುದು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲಾಗುತ್ತಿದ್ದು, ಈ ಆರು ಚಕ್ರದ ಟ್ರಕ್‌ಗಳಲ್ಲಿ 6ಟನ್‌ ಸರಕನ್ನು ಸಾಗಿಸಬಹುದಾಗಿದೆ.

ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಉತ್ತಮ ಪ್ರತಿಕ್ರಿಯೆ ಬಂದರೆ ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಈ ಟ್ರಕ್‌ಗಳು ಆರಂಭದಲ್ಲಿ ಸಾರಿಗೆ ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago