ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ 500 ಟ್ರಕ್ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಇನ್ನು ಈ ಹೊಸ ಟ್ರಕ್ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.
ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಟ್ರಕ್ಗಳ ಕಾರ್ಯಾಚರಣೆ ಮತ್ತು ಡಿಪೋವಾಗಿ ಬಳಸಿಕೊಳ್ಳಲಾಗುವುದು. ಉಳಿದ ಜಾಗವನ್ನು ವಾಣಿಜ್ಯ ಆದಾಯ ಗಳಿಸಲು ಸರ್ಕಾರಿ ಕಂಪೆನಿಗಳಿಗೆ ನೀಡಲಾಗುವುದು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್ಗಳನ್ನು ಬಳಸಲಾಗುತ್ತಿದ್ದು, ಈ ಆರು ಚಕ್ರದ ಟ್ರಕ್ಗಳಲ್ಲಿ 6ಟನ್ ಸರಕನ್ನು ಸಾಗಿಸಬಹುದಾಗಿದೆ.
ಕೆಎಸ್ಆರ್ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಉತ್ತಮ ಪ್ರತಿಕ್ರಿಯೆ ಬಂದರೆ ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಈ ಟ್ರಕ್ಗಳು ಆರಂಭದಲ್ಲಿ ಸಾರಿಗೆ ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…