ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ 500 ಟ್ರಕ್ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಇನ್ನು ಈ ಹೊಸ ಟ್ರಕ್ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.
ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಟ್ರಕ್ಗಳ ಕಾರ್ಯಾಚರಣೆ ಮತ್ತು ಡಿಪೋವಾಗಿ ಬಳಸಿಕೊಳ್ಳಲಾಗುವುದು. ಉಳಿದ ಜಾಗವನ್ನು ವಾಣಿಜ್ಯ ಆದಾಯ ಗಳಿಸಲು ಸರ್ಕಾರಿ ಕಂಪೆನಿಗಳಿಗೆ ನೀಡಲಾಗುವುದು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್ಗಳನ್ನು ಬಳಸಲಾಗುತ್ತಿದ್ದು, ಈ ಆರು ಚಕ್ರದ ಟ್ರಕ್ಗಳಲ್ಲಿ 6ಟನ್ ಸರಕನ್ನು ಸಾಗಿಸಬಹುದಾಗಿದೆ.
ಕೆಎಸ್ಆರ್ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಉತ್ತಮ ಪ್ರತಿಕ್ರಿಯೆ ಬಂದರೆ ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಈ ಟ್ರಕ್ಗಳು ಆರಂಭದಲ್ಲಿ ಸಾರಿಗೆ ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…