ರಾಜ್ಯ

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.

ಈ ಬಾರಿ ಯಾವುದೇ ದಿನಾಂಕ ಘೋಷಣೆ ಇಲ್ಲದೆ, ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸುವ ತಂತ್ರವನ್ನು ನೌಕರರು ರೂಪಿಸಿಕೊಂಡಿರುವುದು ಸರ್ಕಾರ ಹಾಗೂ ಸಾರ್ವಜನಿಕರಿಗೆ ಆತಂಕ ತಂದಿದೆ.

ಈ ಹಿಂದೆ ಆಗಸ್ಟ್.5ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಬೇಕಾಯಿತು. ಆ ಬಳಿಕ ಹಲವು ಸುತ್ತಿನ ಮಾತುಕತೆಗಳು ನಡೆದರೂ, ನೌಕರರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸ್ಪಷ್ಟ ಭರವಸೆ ನೀಡಿಲ್ಲ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ನೌಕರರು ಮತ್ತೊಮ್ಮೆ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದಾರೆ.

ಇದನ್ನು ಓದಿ: ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಸಭೆ ನಡೆದಿತ್ತು. ಆದರೆ, ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿದಂತೆ ಪ್ರಮುಖ ವಿಚಾರಗಳಲ್ಲಿ ಒಮ್ಮತ ಮೂಡದೆ ಸಭೆ ಅಂತ್ಯಗೊಂಡಿದೆ. ಈಗಾಗಲೇ ಮುಖ್ಯಮಂತ್ರಿ ಜೊತೆ ನಾಲ್ಕು ಸುತ್ತಿನ ಸಭೆ, ಸಾರಿಗೆ ಸಚಿವರ ಜೊತೆ ಮೂರು ಸುತ್ತಿನ ಚರ್ಚೆ ನಡೆದಿದ್ದರೂ, ಸ್ಪಷ್ಟ ತೀರ್ಮಾನ ಕೈಗೊಳ್ಳದಿರುವುದು ನೌಕರರಲ್ಲಿ ಆಕ್ರೋಶ ಹೆಚ್ಚಿಸಿದೆ.

ಮೂಲಗಳ ಪ್ರಕಾರ, ಬುಧವಾರದಿಂದ ಸಾರಿಗೆ ನೌಕರರ ಮುಖಂಡರು ರಾಜ್ಯದ ಎಲ್ಲ ಬಸ್ ಡಿಪೋಗಳಿಗೆ ಭೇಟಿ ನೀಡಿ, ನೌಕರರನ್ನು ಮುಷ್ಕರಕ್ಕೆ ಸಜ್ಜಾಗುವಂತೆ ಮನವಿ ಮಾಡುವ ಅಭಿಯಾನ ಆರಂಭಿಸಲಿದ್ದಾರೆ. ಯಾವುದೇ ಕ್ಷಣದಲ್ಲಿ ಬಸ್ ಸಂಚಾರ ನಿಲ್ಲುವ ಸಾಧ್ಯತೆ ಇದೆ.

ಮುಂಚಿತವಾಗಿ ಮುಷ್ಕರದ ದಿನಾಂಕ ಘೋಷಿಸಿದರೆ ಸರ್ಕಾರ ಹಾಗೂ ನ್ಯಾಯಾಲಯದಿಂದ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂಬ ಆತಂಕ ನೌಕರರಲ್ಲಿದೆ. ಹೀಗಾಗಿ ಈ ಬಾರಿ ಕಾರ್ಮಿಕ ಇಲಾಖೆಗೆ ಮುಷ್ಕರ ನೋಟಿಸ್ ನೀಡದೆ, ದಿನಾಂಕ ನಿಗದಿಪಡಿಸದೇ, ಹಠಾತ್ ಸೇವೆ ಸ್ಥಗಿತಗೊಳಿಸುವ ತಂತ್ರ ರೂಪಿಸಲಾಗಿದೆ. ವಾಟ್ಸಾಪ್ ಸೇರಿದಂತೆ ಆಂತರಿಕ ಸಂವಹನ ಮಾಧ್ಯಮಗಳ ಮೂಲಕ ರಾತ್ರೋರಾತ್ರಿ ಸಂದೇಶ ಕಳುಹಿಸಿ, ಏಕಾಏಕಿ ಬಸ್ ಸಂಚಾರ ನಿಲ್ಲಿಸುವ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

ಸಾರಿಗೆ ನೌಕರರ ಪ್ರಕಾರ, 38 ತಿಂಗಳ ವೇತನ ಹಿಂಬಾಕಿ ಇನ್ನೂ ಪಾವತಿಯಾಗಿಲ್ಲ. ಜೊತೆಗೆ 2024ರ ಜನವರಿಯಿಂದಲೇ ಸುಮಾರು 1.20 ಲಕ್ಷ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಜಾರಿಯಾಗಬೇಕಿತ್ತು. ಆದರೆ 2025 ಡಿಸೆಂಬರ್ ಬಂದರೂ ಸರ್ಕಾರ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

4 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

7 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

8 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

8 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

8 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

8 hours ago