ರಾಜ್ಯ

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.

ಈ ಬಾರಿ ಯಾವುದೇ ದಿನಾಂಕ ಘೋಷಣೆ ಇಲ್ಲದೆ, ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸುವ ತಂತ್ರವನ್ನು ನೌಕರರು ರೂಪಿಸಿಕೊಂಡಿರುವುದು ಸರ್ಕಾರ ಹಾಗೂ ಸಾರ್ವಜನಿಕರಿಗೆ ಆತಂಕ ತಂದಿದೆ.

ಈ ಹಿಂದೆ ಆಗಸ್ಟ್.5ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಬೇಕಾಯಿತು. ಆ ಬಳಿಕ ಹಲವು ಸುತ್ತಿನ ಮಾತುಕತೆಗಳು ನಡೆದರೂ, ನೌಕರರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸ್ಪಷ್ಟ ಭರವಸೆ ನೀಡಿಲ್ಲ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ನೌಕರರು ಮತ್ತೊಮ್ಮೆ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದಾರೆ.

ಇದನ್ನು ಓದಿ: ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಸಭೆ ನಡೆದಿತ್ತು. ಆದರೆ, ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿದಂತೆ ಪ್ರಮುಖ ವಿಚಾರಗಳಲ್ಲಿ ಒಮ್ಮತ ಮೂಡದೆ ಸಭೆ ಅಂತ್ಯಗೊಂಡಿದೆ. ಈಗಾಗಲೇ ಮುಖ್ಯಮಂತ್ರಿ ಜೊತೆ ನಾಲ್ಕು ಸುತ್ತಿನ ಸಭೆ, ಸಾರಿಗೆ ಸಚಿವರ ಜೊತೆ ಮೂರು ಸುತ್ತಿನ ಚರ್ಚೆ ನಡೆದಿದ್ದರೂ, ಸ್ಪಷ್ಟ ತೀರ್ಮಾನ ಕೈಗೊಳ್ಳದಿರುವುದು ನೌಕರರಲ್ಲಿ ಆಕ್ರೋಶ ಹೆಚ್ಚಿಸಿದೆ.

ಮೂಲಗಳ ಪ್ರಕಾರ, ಬುಧವಾರದಿಂದ ಸಾರಿಗೆ ನೌಕರರ ಮುಖಂಡರು ರಾಜ್ಯದ ಎಲ್ಲ ಬಸ್ ಡಿಪೋಗಳಿಗೆ ಭೇಟಿ ನೀಡಿ, ನೌಕರರನ್ನು ಮುಷ್ಕರಕ್ಕೆ ಸಜ್ಜಾಗುವಂತೆ ಮನವಿ ಮಾಡುವ ಅಭಿಯಾನ ಆರಂಭಿಸಲಿದ್ದಾರೆ. ಯಾವುದೇ ಕ್ಷಣದಲ್ಲಿ ಬಸ್ ಸಂಚಾರ ನಿಲ್ಲುವ ಸಾಧ್ಯತೆ ಇದೆ.

ಮುಂಚಿತವಾಗಿ ಮುಷ್ಕರದ ದಿನಾಂಕ ಘೋಷಿಸಿದರೆ ಸರ್ಕಾರ ಹಾಗೂ ನ್ಯಾಯಾಲಯದಿಂದ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂಬ ಆತಂಕ ನೌಕರರಲ್ಲಿದೆ. ಹೀಗಾಗಿ ಈ ಬಾರಿ ಕಾರ್ಮಿಕ ಇಲಾಖೆಗೆ ಮುಷ್ಕರ ನೋಟಿಸ್ ನೀಡದೆ, ದಿನಾಂಕ ನಿಗದಿಪಡಿಸದೇ, ಹಠಾತ್ ಸೇವೆ ಸ್ಥಗಿತಗೊಳಿಸುವ ತಂತ್ರ ರೂಪಿಸಲಾಗಿದೆ. ವಾಟ್ಸಾಪ್ ಸೇರಿದಂತೆ ಆಂತರಿಕ ಸಂವಹನ ಮಾಧ್ಯಮಗಳ ಮೂಲಕ ರಾತ್ರೋರಾತ್ರಿ ಸಂದೇಶ ಕಳುಹಿಸಿ, ಏಕಾಏಕಿ ಬಸ್ ಸಂಚಾರ ನಿಲ್ಲಿಸುವ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

ಸಾರಿಗೆ ನೌಕರರ ಪ್ರಕಾರ, 38 ತಿಂಗಳ ವೇತನ ಹಿಂಬಾಕಿ ಇನ್ನೂ ಪಾವತಿಯಾಗಿಲ್ಲ. ಜೊತೆಗೆ 2024ರ ಜನವರಿಯಿಂದಲೇ ಸುಮಾರು 1.20 ಲಕ್ಷ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಜಾರಿಯಾಗಬೇಕಿತ್ತು. ಆದರೆ 2025 ಡಿಸೆಂಬರ್ ಬಂದರೂ ಸರ್ಕಾರ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

3 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

3 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

3 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago