ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಮುಷ್ಕಕ ಹಿಂಪಡೆದಿದ್ದಾರೆ. ಹೀಗಾಗಿ ಡಿ.31ರಂದು ಸಾರಿಗೆ ಸಂಸ್ಥೆ ಬಸ್ಗಳು ಎಂದಿನಂತೆ ರಸ್ತೆಗಿಳಿಯಲಿವೆ.
38 ತಿಂಗಳ ಬಾಕಿ ಹಣ ಬಿಡುಗಡೆ ಮಾಡಬೇಕು ಮತ್ತು 2024ರ ಜನವರಿಯಿಂದ ವೇತನ ಹೆಚ್ಚಳ ಮಾಡಬೇಕು ಅನ್ನೋ ಎರಡು ಪ್ರಮುಖ ಬೇಡಿಕೆಗಳೊಂದಿಗೆ, ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆ 6 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿಯ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳನ್ನು ನಿಲ್ಲಿಸಿ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನೆನ್ನೆ ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ನೌಕರರ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತರಲಾಗಿತ್ತು. ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೌಕರರ ಬೇಡಿಕೆಯನ್ನು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. 11 ಸಾವಿರ ನೌಕರರಿಗೆ ಬಾಕಿಯಿದ್ದ 220 ಕೋಟಿ ಬಿಡುಗಡೆ ಮಾಡಿದ್ದಾರೆ, ಮತ್ತೆ ಎರಡು ಸಾವಿರ ಕೋಟಿ ರೂ. ಸಿಎಂ ಬಿಡುಗಡೆ ಮಾಡಿದ್ದಾರೆ. ಆ ಹಣ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ. ವೇತನ ಪರಿಷ್ಕರಣೆ ಬಗ್ಗೆ ಕೂಡ ಸಿಎಂ ಗೆ ಹೇಳಿದ್ದೇವೆ. ಫೆಬ್ರವರಿಯಲ್ಲಿ ಬಜೆಟ್ ಬರಲಿದೆ. ಆಗ ಅನುದಾನ ನೀಡಿ ಅಂತ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಅಲ್ಲದೇ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ವಾಪಸ್ಸು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…