ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಮುಷ್ಕಕ ಹಿಂಪಡೆದಿದ್ದಾರೆ. ಹೀಗಾಗಿ ಡಿ.31ರಂದು ಸಾರಿಗೆ ಸಂಸ್ಥೆ ಬಸ್ಗಳು ಎಂದಿನಂತೆ ರಸ್ತೆಗಿಳಿಯಲಿವೆ.
38 ತಿಂಗಳ ಬಾಕಿ ಹಣ ಬಿಡುಗಡೆ ಮಾಡಬೇಕು ಮತ್ತು 2024ರ ಜನವರಿಯಿಂದ ವೇತನ ಹೆಚ್ಚಳ ಮಾಡಬೇಕು ಅನ್ನೋ ಎರಡು ಪ್ರಮುಖ ಬೇಡಿಕೆಗಳೊಂದಿಗೆ, ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆ 6 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿಯ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳನ್ನು ನಿಲ್ಲಿಸಿ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನೆನ್ನೆ ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ನೌಕರರ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತರಲಾಗಿತ್ತು. ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೌಕರರ ಬೇಡಿಕೆಯನ್ನು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. 11 ಸಾವಿರ ನೌಕರರಿಗೆ ಬಾಕಿಯಿದ್ದ 220 ಕೋಟಿ ಬಿಡುಗಡೆ ಮಾಡಿದ್ದಾರೆ, ಮತ್ತೆ ಎರಡು ಸಾವಿರ ಕೋಟಿ ರೂ. ಸಿಎಂ ಬಿಡುಗಡೆ ಮಾಡಿದ್ದಾರೆ. ಆ ಹಣ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ. ವೇತನ ಪರಿಷ್ಕರಣೆ ಬಗ್ಗೆ ಕೂಡ ಸಿಎಂ ಗೆ ಹೇಳಿದ್ದೇವೆ. ಫೆಬ್ರವರಿಯಲ್ಲಿ ಬಜೆಟ್ ಬರಲಿದೆ. ಆಗ ಅನುದಾನ ನೀಡಿ ಅಂತ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಅಲ್ಲದೇ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ವಾಪಸ್ಸು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…