ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ. ಬಳಿಕ ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ನೋಟಿಸ್ ನೀಡಲಾಗುತ್ತದೆ.
ಒಟ್ಟು ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದು, ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಮೂಲಕ ಹೊಸ ವರ್ಷ ಆಚರಣೆಗೆ ದೂರದ ಊರಿಗೆ ಹೋಗಬೇಕಾದ ಪ್ರಯಾಣಿಕರಿಗೆ ಸಾರಿಗೆ ನೌಕರರು ಬಿಗ್ ಶಾಕ್ ನೀಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆ ಈಡೇರುವವರೆಗೂ ಮುಷ್ಕರವನ್ನು ಕೈಬಿಡಲ್ಲ ಎಂದು ಎಚ್ಚರಿಕೆ ನೀಡಲಾಗಿದ್ದು, ಈ ಬಗ್ಗೆ ಸರ್ಕಾರ ಈಗಿನಿಂದಲೇ ಎಚ್ಚೆತ್ತುಕೊಳ್ಳಬೇಕಿದೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…