ರಾಜ್ಯ

ಕ್ಷಣ ಕ್ಷಣಕ್ಕೂ ಕಾವೇರುತ್ತಿರುವ ಮಂಡ್ಯ ಅಖಾಡ; ಸುಮಲತಾ-ಎಚ್‌ಡಿಕೆ ಭೇಟಿಗೆ ಡಿಕೆಶಿ ಟೀಕೆ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು ಬಾಕಿ ಇದೆ. ಏಪ್ರಿಲ್‌ 3ಕ್ಕೆ ನಿರ್ಧಾರ ತಿಳಿಸುವುದಾಗಿ ಸುಮಲತಾ ಹೇಳಿರುವುದು ಮಂಡ್ಯ ಅಖಾಡಕ್ಕೆ ಹೊಸ ಆಯಾಮ ಕೊಟ್ಟಿದೆ.

ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಭಾನುವಾರ ಸುಮಲತಾರನ್ನು ಭೇಟಿಯಾಗಿದ್ದು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಏಪ್ರಿಲ್‌.4 ರಂದು ನಾಮಪತ್ರ ಸಲ್ಲಿಸುತ್ತೀದ್ದೇನೆ. ಸಹಕಾರ ಕೊಡಿ ಅಂತಾ ಮನವಿ ಮಾಡಿದ್ದಾರೆ. ಜೊತೆಗೆ ಸುಮಲತಾ ನಾನು ನನ್ನ ವೈರಿ ಅಲ್ಲ ಎಂದೂ ಹೇಳಿದ್ದಾರೆ.

ನಾನೇನು ವೈರಿನಾ, ವಿಷ ಹಾಕಿದ್ನಾ? ಡಿಕೆಶಿ ತಿರುಗೇಟು.
ಸುಮಲತಾ ನನ್ನ ವೈರಿ ಅಲ್ಲ ಎಂಬ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕಿಡಿ ಕಾರಿದ್ದಾರೆ. ನಾನೇನು ವೈರಿಯಾ, ವಿಷ ಹಾಕಿದ್ನ ಎಂದು ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಡಿಕೆಯಷ್ಟು ಹಿತೈಷಿ ಯಾರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಸುಮಲತಾ ಕೂಡ ನಾವೇನಾದರೂ ವಿಷ ಹಾಕಿದ್ದೆವಾ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಮಧ್ಯೆ ಅಂಬರೀಶ್‌ ಕಾಂಗ್ರೆಸ್‌ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು? ಕಾಂಗ್ರೆಸ್‌ನಲ್ಲಿ ನಮ್ಮ ಕುಟುಂಬ 25 ವರ್ಷ ಸೇವೆ ಸಲ್ಲಿಸಿದೆ. ಈ 5 ವರ್ಷದಲ್ಲಿ ಕಾಂಗ್ರೆಸ್‌ ನಾಯಕರಿಗೆ ಅದು ನೆನಪಾಗಲಿಲ್ಲವಾ ಎಂದು ಡಿಕೆಶಿಗೆ ಸಂಸದೆ ಸುಮಲತಾ ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಮಂಡ್ಯ ಅಖಾಡದಲ್ಲಿ ವಿಷದ ವಿಚಾರ ಭಾರಿ ಸದ್ದು ಮಾಡುತ್ತಿದೆ. ಸಂಸದೆ ಸುಮಲತಾ ಅಂಬರೀಶ್‌ನ ಮುಂದಿನ ನಡೆ ಏನು ಎಂಬುದ ಕುತೂಹಲದ ವಿಷಯವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

34 mins ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

2 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

2 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

3 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

3 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

4 hours ago