ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು ಬಾಕಿ ಇದೆ. ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವುದಾಗಿ ಸುಮಲತಾ ಹೇಳಿರುವುದು ಮಂಡ್ಯ ಅಖಾಡಕ್ಕೆ ಹೊಸ ಆಯಾಮ ಕೊಟ್ಟಿದೆ.
ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಭಾನುವಾರ ಸುಮಲತಾರನ್ನು ಭೇಟಿಯಾಗಿದ್ದು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಏಪ್ರಿಲ್.4 ರಂದು ನಾಮಪತ್ರ ಸಲ್ಲಿಸುತ್ತೀದ್ದೇನೆ. ಸಹಕಾರ ಕೊಡಿ ಅಂತಾ ಮನವಿ ಮಾಡಿದ್ದಾರೆ. ಜೊತೆಗೆ ಸುಮಲತಾ ನಾನು ನನ್ನ ವೈರಿ ಅಲ್ಲ ಎಂದೂ ಹೇಳಿದ್ದಾರೆ.
ನಾನೇನು ವೈರಿನಾ, ವಿಷ ಹಾಕಿದ್ನಾ? ಡಿಕೆಶಿ ತಿರುಗೇಟು.
ಸುಮಲತಾ ನನ್ನ ವೈರಿ ಅಲ್ಲ ಎಂಬ ಎಚ್ಡಿಕೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ. ನಾನೇನು ವೈರಿಯಾ, ವಿಷ ಹಾಕಿದ್ನ ಎಂದು ತಿರುಗೇಟು ನೀಡಿದ್ದಾರೆ.
ಡಿಕೆ ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಡಿಕೆಯಷ್ಟು ಹಿತೈಷಿ ಯಾರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಸುಮಲತಾ ಕೂಡ ನಾವೇನಾದರೂ ವಿಷ ಹಾಕಿದ್ದೆವಾ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದ್ದಾರೆ.
ಈ ಮಧ್ಯೆ ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಏನು ಅನ್ಯಾಯ ಮಾಡಿದ್ದರು? ಕಾಂಗ್ರೆಸ್ನಲ್ಲಿ ನಮ್ಮ ಕುಟುಂಬ 25 ವರ್ಷ ಸೇವೆ ಸಲ್ಲಿಸಿದೆ. ಈ 5 ವರ್ಷದಲ್ಲಿ ಕಾಂಗ್ರೆಸ್ ನಾಯಕರಿಗೆ ಅದು ನೆನಪಾಗಲಿಲ್ಲವಾ ಎಂದು ಡಿಕೆಶಿಗೆ ಸಂಸದೆ ಸುಮಲತಾ ಪ್ರಶ್ನೆ ಮಾಡಿದ್ದಾರೆ.
ಒಟ್ಟಿನಲ್ಲಿ ಮಂಡ್ಯ ಅಖಾಡದಲ್ಲಿ ವಿಷದ ವಿಚಾರ ಭಾರಿ ಸದ್ದು ಮಾಡುತ್ತಿದೆ. ಸಂಸದೆ ಸುಮಲತಾ ಅಂಬರೀಶ್ನ ಮುಂದಿನ ನಡೆ ಏನು ಎಂಬುದ ಕುತೂಹಲದ ವಿಷಯವಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…