ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಮಾಜಿ ಸಚಿವ ಭೈರತಿ ಬಸವರಾಜು ಸುಳ್ಳು ಹೇಳಿದ್ದಾರೆ. ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದ್ದು, ಅವರನ್ನು ಬಂಧಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನು ಓದಿ : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಹೈಕೋರ್ಟ್‌ನಿಂದ ಮಧ್ಯಂತರ ರಿಲೀಫ್‌ ಸಿಕ್ಕಿತ್ತು. ನ್ಯಾಯಮೂರ್ತಿ ಅರುಣ್‌ ಅವರ ಪೀಠದಿಂದ ಬಂದ ಆದೇಶವು ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು.

ಹೈಕೋರ್ಟ್‌ ಮಧ್ಯಂತರ ಆದೇಶದಲ್ಲಿ ಶಾಸಕ ಭೈರತಿ ಬಸವರಾಜು ವಿರುದ್ಧ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿತ್ತು. ಜೊತೆಗೆ ಅವರು ತನಿಖೆಗೆ ಸಹಕಾರ ನೀಡಬೇಕು ಎಂದು ಆದೇಶ ನೀಡಿತ್ತು. ಆದರೀಗ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಮತ್ತೆ ಕೋರ್ಟ್‌ ಅರ್ಜಿ ಸಲ್ಲಿಕೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 mins ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

44 mins ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

1 hour ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

2 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

2 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

3 hours ago