Truckers call off strike after assurance from Karnataka govt (2)
ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ.
ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಘೋಷಣೆ ಮಾಡಿದ್ದಾರೆ.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯುತ್ತೇವೆ. ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.
ಇನ್ನೂ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಲಾರಿ ಮಾಲೀಕರ ಸಂಘದವರು ಪ್ರಮುಖವಾಗಿ 6 ಬೇಡಿಕೆ ಇಟ್ಟಿದ್ದರು. ಗಡಿ ಭಾಗದಲ್ಲಿ ಟೋಲ್ ತೆಗೆಯಲು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಮೂರು ದಿನಗಳ ಬಳಿಕ ವರದಿ ತರಿಸಿಕೊಳ್ಳುತ್ತೇನೆ. ನೋ ಎಂಟ್ರಿ ಬೋರ್ಡ್ ಬದಲಾವಣೆ ಕುರಿತು ಚರ್ಚೆ ಮಾಡುತ್ತೇನೆ. ಇದೆಲ್ಲಾ ಸಿಎಂ ಗಮನಕ್ಕೆ ತರಲಿದ್ದೇನೆ ಎಂದು ಹೇಳಿದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…