ರಾಜ್ಯ

ಸಂಧಾನ ಸಭೆ ಸಫಲ ; 3 ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರ ಅಂತ್ಯ

ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್‌ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ.

ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಘೋಷಣೆ ಮಾಡಿದ್ದಾರೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯುತ್ತೇವೆ. ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.

ಇನ್ನೂ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಲಾರಿ ಮಾಲೀಕರ ಸಂಘದವರು ಪ್ರಮುಖವಾಗಿ 6 ಬೇಡಿಕೆ ಇಟ್ಟಿದ್ದರು. ಗಡಿ ಭಾಗದಲ್ಲಿ ಟೋಲ್ ತೆಗೆಯಲು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಮೂರು ದಿನಗಳ ಬಳಿಕ ವರದಿ ತರಿಸಿಕೊಳ್ಳುತ್ತೇನೆ. ನೋ ಎಂಟ್ರಿ ಬೋರ್ಡ್ ಬದಲಾವಣೆ ಕುರಿತು ಚರ್ಚೆ ಮಾಡುತ್ತೇನೆ. ಇದೆಲ್ಲಾ ಸಿಎಂ ಗಮನಕ್ಕೆ ತರಲಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

39 mins ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

9 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

19 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

23 hours ago