Truckers call off strike after assurance from Karnataka govt (2)
ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ.
ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಘೋಷಣೆ ಮಾಡಿದ್ದಾರೆ.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯುತ್ತೇವೆ. ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.
ಇನ್ನೂ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಲಾರಿ ಮಾಲೀಕರ ಸಂಘದವರು ಪ್ರಮುಖವಾಗಿ 6 ಬೇಡಿಕೆ ಇಟ್ಟಿದ್ದರು. ಗಡಿ ಭಾಗದಲ್ಲಿ ಟೋಲ್ ತೆಗೆಯಲು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಮೂರು ದಿನಗಳ ಬಳಿಕ ವರದಿ ತರಿಸಿಕೊಳ್ಳುತ್ತೇನೆ. ನೋ ಎಂಟ್ರಿ ಬೋರ್ಡ್ ಬದಲಾವಣೆ ಕುರಿತು ಚರ್ಚೆ ಮಾಡುತ್ತೇನೆ. ಇದೆಲ್ಲಾ ಸಿಎಂ ಗಮನಕ್ಕೆ ತರಲಿದ್ದೇನೆ ಎಂದು ಹೇಳಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…