Mysore
31
few clouds

Social Media

ಶುಕ್ರವಾರ, 01 ಮೇ 2026
Light
Dark

ಕಾಂಗ್ರೆಸ್‌ನ ನಿಜ ಬಣ್ಣ ಬಯಲಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌  ಗ್ಯಾರಂಟಿಗಳನ್ನು ಘೋಷಿಸಿ, ಸುಳ್ಳು ಆಶ್ವಾಸನೆ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಈಗ ಅವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಆಕ್ರೋಶಗೊಂಡು ಸುಳ್ಳು ಹೆಸರಿನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂತು ಅದು ಈಗ ಎಕ್ಸ್‌ಪೋಸ್‌ ಆಗುತ್ತಿದೆ ಎಂದು ಹರಿಹಾಯ್ದರು.

ಉಚಿತ ವಿದ್ಯುತ್‌ ಎಂದರು ಆದರೆ ಈಗ ದರ ಹೆಚ್ಚಳವಾಗಿದೆ. ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಪೆಟ್ರೋಲ್‌, ಡೀಸೆಲ್‌ಗೆ ಸೆಸ್‌ ಹಾಕಿದ್ದಾರೆ. ಈಗ ಬಸ್‌ ಟಿಕೆಟ್‌ ದರ ಕೂಡ ಹೆಚ್ಚಳ ಮಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ 2000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

Tags:
error: Content is protected !!