ರಾಜ್ಯ

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳಬೇಕೆಂದರು.

ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು
ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ , ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ ಎಂದರು.

ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ ಎಂದರು.

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನಿವುದನ್ನು ಸ್ಮರಿಸಬೇಕು ಎಂದರು.

ಅಂಬೇಡ್ಕರ್ ಅವರು ದೇಶದ ಸ್ವಾತಂತ್ರ್ಯ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ, ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದಿದ್ದರು. ಸಮಾನತೆಯ ಆಶಯದಿಂದಲೇ ಭಾಗ್ಯಗಳನ್ನು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ಎಂದರು.

ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌ ಸೈದ್ಧಾಂತಿಕವಾಗಿ ನಮ್ಮ ವಿರೋಧಿಗಳಾದರೂ ಜನರನ್ನು ಪ್ರೀತಿಸಬೇಕು ಎಂದರು.

ಕುಲದ ನೆಲೆಯನ್ನು ಬಲ್ಲಿರಾ ಎಂದ ಕನಕದಾಸರ ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ ಎಂದರು.

ದಯೆ, ಕರುಣೆ, ಧರ್ಮದ ಮೂಲವಾಗಬೇಕು ಎಂಬ ಬಸವಣ್ಣನವರ ಮಾತುಗಳನ್ನು ಪಾಲಿಸಬೇಕು ಎಂದರು.

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ ಎಂದರು.

ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೆಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡುವ ಭರವಸೆ ನೀಡಿದರು.

ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ್, ಪ್ರಕಾಶ್ ಕೋಳಿವಾಡ, ಯಾಸಿರ್ ಖಾನ್ ಪಠಾಣ್, ಯು. ಬಿ.ಬಣಕಾರ್ , ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೊದಲಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago