ರಾಜ್ಯ

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳಬೇಕೆಂದರು.

ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು
ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ , ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ ಎಂದರು.

ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ ಎಂದರು.

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನಿವುದನ್ನು ಸ್ಮರಿಸಬೇಕು ಎಂದರು.

ಅಂಬೇಡ್ಕರ್ ಅವರು ದೇಶದ ಸ್ವಾತಂತ್ರ್ಯ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ, ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದಿದ್ದರು. ಸಮಾನತೆಯ ಆಶಯದಿಂದಲೇ ಭಾಗ್ಯಗಳನ್ನು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ಎಂದರು.

ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌ ಸೈದ್ಧಾಂತಿಕವಾಗಿ ನಮ್ಮ ವಿರೋಧಿಗಳಾದರೂ ಜನರನ್ನು ಪ್ರೀತಿಸಬೇಕು ಎಂದರು.

ಕುಲದ ನೆಲೆಯನ್ನು ಬಲ್ಲಿರಾ ಎಂದ ಕನಕದಾಸರ ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ ಎಂದರು.

ದಯೆ, ಕರುಣೆ, ಧರ್ಮದ ಮೂಲವಾಗಬೇಕು ಎಂಬ ಬಸವಣ್ಣನವರ ಮಾತುಗಳನ್ನು ಪಾಲಿಸಬೇಕು ಎಂದರು.

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ ಎಂದರು.

ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೆಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡುವ ಭರವಸೆ ನೀಡಿದರು.

ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ್, ಪ್ರಕಾಶ್ ಕೋಳಿವಾಡ, ಯಾಸಿರ್ ಖಾನ್ ಪಠಾಣ್, ಯು. ಬಿ.ಬಣಕಾರ್ , ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೊದಲಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

43 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

45 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

46 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

48 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

53 mins ago