ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಿಎಸ್ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ.8ರವರೆಗೆ 11 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. ಜಲಾಶಯದ ಎಂಜಿನಿಯರ್ಗಳ ಲೆಕ್ಕಾಚಾರದ ಪ್ರಕಾರ, ಮೇಲ್ದಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಉಳಿದ ಶುದ್ಧ ಲಭ್ಯತೆ ಕೇವಲ 3 ಟಿಎಂಸಿ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು. ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…