ರಾಜ್ಯ

ತುಮಕೂರು: ಮಕ್ಕಳ ಮಾರಾಟ ಜಾಲ ಭೇದಿಸಿದ ಪೊಲೀಸರು

ಬೆಂಗಳೂರು: ಅವಿವಾಹಿತ ಹಾಗೂ ಅಕ್ರಮ ಸಂಬಂಧದಿಂದ ಗರ್ಭಧರಿಸಿ ಮಹಿಳೆಯರನ್ನು ಪತ್ತೆಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಜಾಲವನ್ನು ಭೇಧಿಸಿರುವ ತುಮಕೂರು ಪೊಲೀಸರು, 7 ಮಂದಿ ಆರೋಪಿಗಳನ್ನು ಬಂಧಿಸಿ, 5 ಮಕ್ಕಳನ್ನು ರಕ್ಷಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಣಿಗಲ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಆಗಿ ಕೆಲಸ ಮಾಡುತ್ತಿರುವ ಯು.ಡಿ.ಮಹೇಶ್, ಮೆಹಬೂಬ್ ಷರೀಫ್ ಎಂಬ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಇಬ್ಬರನ್ನು, ಜಾತ್ರೆಗಳಲ್ಲಿ ಹಚ್ಚೆ ಬರೆಯುವ ಗುಬ್ಬಿ ತಾಲ್ಲೂಕಿನ ಚಿಕ್ಕಗುಡ್ಡ ಗ್ರಾಮದ ಕೆ.ಎನ್.ರಾಮಕೃಷ್ಣ, ತುಮಕೂರಿನ ಭಾರತಿ ನಗರದ ಹನುಮಂತರಾಜು, ನಾಗಮಂಗಲ ಮುಬಾರಕ್ ಪಾಶ, ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ಪೂರ್ಣಿಮಾ, ಶಿರಾ ನಗರದ ಸೌಜನ್ಯ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 50 ಸಾವಿರ ರೂ ನಗದು ಹಾಗೂ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದೇ ಜೂ.9 ರಂದು ಗುಬ್ಬಿ ನಗರದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಹದೇವಿ ಎಂಬುವರು ಮಲಗಿದ್ದಾಗ ಆಕೆಯ 11 ತಿಂಗಳ ಗಂಡು ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಬಗ್ಗೆ ಮಹಿಳೆ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಗುಬ್ಬಿ ಪೊಲೀಸರು ತಾಂತ್ರಿಕ ಸಹಾಯದ ಆಧಾರದಲ್ಲಿ ಮಗುವನ್ನು ಕಳ್ಳತನ ಮಾಡಿದ ರಾಮಕೃಷ್ಣ ಹಾಗೂ ಹನುಮಂತರನ್ನು ಬಂಧಿಸಿದ್ದರು. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಮಗುವನ್ನು ಬೆಳ್ಳೂರು ಕ್ರಾಸ್‍ನ ಮುಬಾರಕ್ ಅವರಿಗೆ 1.75 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾಗಿ ವಿವರಿಸಿದ್ದಾರೆ.

ಆರೋಪಿಗಳು ಮಕ್ಕಳನ್ನು 2 ರಿಂದ 3 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳು ಈವರೆಗೂ 9 ಮಕ್ಕಳನ್ನು ಮಾರಾಟ ಮಾಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು 5 ಮಕ್ಕಳನ್ನು ಸಂರಕ್ಷಿಸಿದ್ದಾರೆ. ಒಂದು ಮಗು ಮೃತಪಟ್ಟಿದ್ದು, ಇನ್ನೊಂದನ್ನು ಪೋಷಕರಿಗೆ ವಾಪಸ್ ನೀಡಲಾಗಿದೆ.

ಸಂರಕ್ಷಿಸಲಾದ 5 ಮಕ್ಕಳಲ್ಲಿ 4 ಮಕ್ಕಳು ಕಲ್ಯಾಣ ಕೇಂದ್ರದ ಆಶಯದಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಆರೋಪಿಗಳು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

39 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago