ಬೆಂಗಳೂರು: ತುಂಗಭದ್ರಾ ಜಲಾಶಯದ ಗೇಟ್ ಕಟ್ ಆಗಿ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ಟಾಗಿದೆ. ಜಲಾಶಯದಿಂದ ಹೊರಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದರಿಂದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ರೈತರನ್ನು ಚಿಂತೆಗೀಡು ಮಾಡಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಬರಗಾಲದಿಂದ ತತ್ತರಿಸಿದ್ದ ರೈತರು, ಈ ಬಾರಿ ಮುಂಗಾರು ಮಳೆಯಾದ್ದರಿಂದ ಬಹಳ ಸಂತೋಷದಲ್ಲಿದ್ದರು. ಈ ಬಾರಿಯಾದರೂ ಉತ್ತಮ ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ಈಗ ಘಟನೆ ಸಂಭವಿಸಿದೆ. ಇದಕ್ಕೆಲ್ಲಾ ನೇರ ಕಾರಣ ರಾಜ್ಯ ಸರ್ಕಾರ. ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪ ಮಾಡಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…