ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ ಮನೆಮಾಡಿದೆ.
ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ನೀರ ರಭಸವಾಗಿ ಹರಿಯುತ್ತಿದ್ದು, ಒಂದೇ ಗೇಟ್ನಿಂದ ಬರೋಬ್ಬರಿ 35 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಜಲಾಶಯದ 32 ಗೇಟ್ಗಳ ಪೈಕಿ 28 ಗೇಟ್ಗಳನ್ನು ತೆರೆಯಲಾಗಿದ್ದು, 4 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಕಂಪನಿಯಿಂದ ಹೊಸಗೇಟ್ ತಂದು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸಗೇಟ್ ಅಳವಡಿಸಲು ವಾರಕ್ಕೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ದುರಸ್ತಿ ಕಾರ್ಯ ವಿಳಂಬವಾದರೂ ಡ್ಯಾಂನಲ್ಲಿ ನೀರು ಖಾಲಿಯಾಗುವ ಆತಂಕ ಮನೆಮಾಡಿದೆ.
ಇನ್ನು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ರೈತರಿಗೆ ಸಂಕಷ್ಟ ತಂದೊಡ್ಡಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜನರಿಗೂ ತೀವ್ರ ಸಂಕಷ್ಟ ಎದುರಾಗಿದೆ.
ಡ್ಯಾಂನಲ್ಲಿ ನೀರು ಖಾಲಿಯಾದರೆ ಕೃಷಿ ಜಮೀನುಗಳಿಗೂ ನೀರು ಸಿಗದ ಪರಿಸ್ಥಿತಿ ಅಲ್ಲಿನ ಜಿಲ್ಲೆಗಳಿಗೂ ಕಾಡಲಿದೆ. ಈ ಹಿನ್ನೆಲೆಯಲ್ಲಿ ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಆಂಧ್ರ ಹಾಗೂ ತೆಲಂಗಾಣದ ನೀರಾವರಿ ಇಲಾಖೆ ಅಧಿಕಾರಿಗಳು ಕರ್ನಾಟಕದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…
ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…
ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು…
ಎಸ್.ಎಸ್.ಭಟ್ ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ ನಂಜನಗೂಡು: ಹಿಮಾಲಯದಲ್ಲಿ ಪ್ರತಿ…