ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ ಮನೆಮಾಡಿದೆ.
ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ನೀರ ರಭಸವಾಗಿ ಹರಿಯುತ್ತಿದ್ದು, ಒಂದೇ ಗೇಟ್ನಿಂದ ಬರೋಬ್ಬರಿ 35 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಜಲಾಶಯದ 32 ಗೇಟ್ಗಳ ಪೈಕಿ 28 ಗೇಟ್ಗಳನ್ನು ತೆರೆಯಲಾಗಿದ್ದು, 4 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಕಂಪನಿಯಿಂದ ಹೊಸಗೇಟ್ ತಂದು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸಗೇಟ್ ಅಳವಡಿಸಲು ವಾರಕ್ಕೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ದುರಸ್ತಿ ಕಾರ್ಯ ವಿಳಂಬವಾದರೂ ಡ್ಯಾಂನಲ್ಲಿ ನೀರು ಖಾಲಿಯಾಗುವ ಆತಂಕ ಮನೆಮಾಡಿದೆ.
ಇನ್ನು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ರೈತರಿಗೆ ಸಂಕಷ್ಟ ತಂದೊಡ್ಡಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜನರಿಗೂ ತೀವ್ರ ಸಂಕಷ್ಟ ಎದುರಾಗಿದೆ.
ಡ್ಯಾಂನಲ್ಲಿ ನೀರು ಖಾಲಿಯಾದರೆ ಕೃಷಿ ಜಮೀನುಗಳಿಗೂ ನೀರು ಸಿಗದ ಪರಿಸ್ಥಿತಿ ಅಲ್ಲಿನ ಜಿಲ್ಲೆಗಳಿಗೂ ಕಾಡಲಿದೆ. ಈ ಹಿನ್ನೆಲೆಯಲ್ಲಿ ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಆಂಧ್ರ ಹಾಗೂ ತೆಲಂಗಾಣದ ನೀರಾವರಿ ಇಲಾಖೆ ಅಧಿಕಾರಿಗಳು ಕರ್ನಾಟಕದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…