ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ ಮನೆಮಾಡಿದೆ.
ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ನೀರ ರಭಸವಾಗಿ ಹರಿಯುತ್ತಿದ್ದು, ಒಂದೇ ಗೇಟ್ನಿಂದ ಬರೋಬ್ಬರಿ 35 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಜಲಾಶಯದ 32 ಗೇಟ್ಗಳ ಪೈಕಿ 28 ಗೇಟ್ಗಳನ್ನು ತೆರೆಯಲಾಗಿದ್ದು, 4 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಕಂಪನಿಯಿಂದ ಹೊಸಗೇಟ್ ತಂದು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸಗೇಟ್ ಅಳವಡಿಸಲು ವಾರಕ್ಕೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ದುರಸ್ತಿ ಕಾರ್ಯ ವಿಳಂಬವಾದರೂ ಡ್ಯಾಂನಲ್ಲಿ ನೀರು ಖಾಲಿಯಾಗುವ ಆತಂಕ ಮನೆಮಾಡಿದೆ.
ಇನ್ನು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಳಚಿಕೊಂಡಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ರೈತರಿಗೆ ಸಂಕಷ್ಟ ತಂದೊಡ್ಡಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜನರಿಗೂ ತೀವ್ರ ಸಂಕಷ್ಟ ಎದುರಾಗಿದೆ.
ಡ್ಯಾಂನಲ್ಲಿ ನೀರು ಖಾಲಿಯಾದರೆ ಕೃಷಿ ಜಮೀನುಗಳಿಗೂ ನೀರು ಸಿಗದ ಪರಿಸ್ಥಿತಿ ಅಲ್ಲಿನ ಜಿಲ್ಲೆಗಳಿಗೂ ಕಾಡಲಿದೆ. ಈ ಹಿನ್ನೆಲೆಯಲ್ಲಿ ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಆಂಧ್ರ ಹಾಗೂ ತೆಲಂಗಾಣದ ನೀರಾವರಿ ಇಲಾಖೆ ಅಧಿಕಾರಿಗಳು ಕರ್ನಾಟಕದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…