ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಗೇಟ್ ದುರಸ್ತಿ ಕಾರ್ಯವನ್ನು ತಜ್ಞರ ತಂಡ ಪರಿಶೀಲನೆ ನಡೆಸಿದೆ.
ಇನ್ನು ಜಲಾಶಯಕ್ಕೆ ಆಂಧ್ರಪ್ರದೇಶದ ಜಲ ಸಂಪನ್ಮೂಲ ಸಚಿವ ನಿರ್ಮಲಾ ರಾಮನಾಯ್ಡು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ದುರಸ್ತಿ ಕಾರ್ಯ ಪರಿಶೀಲಿಸಿದ ಸಚಿವರು ಹೊಸ ಗೇಟ್ ಅಳವಡಿಕೆ ಕುರಿತು ತಜ್ಞರೊಂದಿಗೆ ಮಾಹಿತಿ ಪಡೆದುಕೊಂಡರು.
ಆಂಧ್ರಪ್ರದೇಶ ತಜ್ಞರ ತಂಡವು ಸಹ ಗೇಟ್ ಕೊಚ್ಚಿ ಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ವ್ಯವಸ್ಥೆ ಮತ್ತು ಹೊಸ ಗೇಟ್ ಅಳವಡಿಸುವ ಪ್ರಯತ್ನ ಕುರಿತು ಚರ್ಚೆ ನಡೆಸಿತು.
ಇಂದು ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ಸ್ಗೂ ಹೆಚ್ಚಿನ ನೀರನ್ನು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರದ ಕರ್ನೂಲ್ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಆಂಧ್ರಪ್ರದೇಶ ಸರ್ಕಾರ ಹೈಅಲರ್ಟ್ ಘೋಷಣೆ ಮಾಡಿದೆ.
ಜನರು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ನದಿ ಬಳಿ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…