ವಿಜಯನಗರ: ತುಂಗಭದ್ರಾ ಡ್ಯಾಂ ಗೇಟ್ ಕಟ್ ಆಗಿದ್ದು, ಅನ್ನದಾತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕೊಟ್ಟಿದ್ದಾರೆ.
ತುಂಗಭದ್ರಾ ಡ್ಯಾಂನ 33 ಗೇಟ್ಗಳ ಪೈಕಿ ಮಧ್ಯದಲ್ಲಿರುವ 19 ನೇ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿದೆ. ಗೇಟ್ ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿರುವ 65 ಟಿಎಂಸಿ ನೀರನ್ನು ಖಾಲಿ ಮಾಡಲೇಬೇಕಿದೆ.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಡ್ಯಾಂನಲ್ಲಿರುವ 105 ಟಿಎಂಸಿ ನೀರಿನ ಪೈಕಿ 65 ಟಿಎಂಸಿ ನೀರನ್ನು ಹೊರಬಿಡಲೇಬೇಕಿದೆ. 65 ಟಿಎಂಸಿ ನೀರನ್ನು ಹೊರಬಿಟ್ಟರಷ್ಟೇ ಗೇಟ್ ರಿಪೇರಿ ಮಾಡಬಹುದಾಗಿದೆ ಎಂದರು.
105 ಟಿಎಂಸಿ ನೀರಿನ ಪೈಕಿ 65 ಟಿಎಂಸಿ ನೀರನ್ನು ಹೊರಬಿಟ್ಟರೆ ರೈತರು ಎರಡು ಬೆಳೆ ಬೆಳೆಯುವ ಬದಲು ಒಂದೇ ಬೆಳೆಗೆ ತೃಪ್ತಿಪಟ್ಟುಕೊಳ್ಳಲಿದ್ದಾರೆ.
ಈ ಭಾಗದಲ್ಲಿ ಹಲವು ಜಿಲ್ಲೆಗಳ ರೈತರು ತುಂಗಭದ್ರಾ ಜಲಾಶಯದ ನೀರನ್ನು ನಂಬಿ ತಮ್ಮ ಜಮೀನುಗಳಲ್ಲಿ ವರ್ಷಕ್ಕೆ ಎರಡು ಬೆಳೆ ಬೆಳೆಯುತ್ತಿದ್ದರು.
ಬೆಳೆಗಳ ಜೊತೆಗೆ ಜನರು ಹಾಗೂ ಜಾನುವಾರುಗಳಿಗೂ ವರ್ಷಪೂರ್ತಿ ಕುಡಿಯಲು ನೀರು ಸಿಗುತ್ತಿತ್ತು. ಈಗ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಹೊರಬಂದ ಹಿನ್ನೆಲೆಯಲ್ಲಿ ರೈತರು ತೀವ್ರ ಬೇಸರದಲ್ಲಿದ್ದು, ಕೇವಲ ಒಂದು ಬೆಳೆಗೆ ಸಮಾಧಾನ ಪಡುವಂತಾಗಿದೆ.
ಇನ್ನು ಗೇಟ್ ಮುರಿದು ಹೋಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳಿಗೆ ಪ್ರವಾಹ ಭೀತಿ ಶುರುವಾಗಿದೆ. ಸಂಜೆಯ ವೇಳೆಗೆ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆಗಳಿವೆ. ಇದರಿಂದ ನದಿ ಪಾತ್ರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…