ವಿಜಯನಗರ: ತುಂಗಭದ್ರಾ ಡ್ಯಾಂ ಗೇಟ್ ಕಟ್ ಆಗಿದ್ದು, ಅನ್ನದಾತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕೊಟ್ಟಿದ್ದಾರೆ.
ತುಂಗಭದ್ರಾ ಡ್ಯಾಂನ 33 ಗೇಟ್ಗಳ ಪೈಕಿ ಮಧ್ಯದಲ್ಲಿರುವ 19 ನೇ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿದೆ. ಗೇಟ್ ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿರುವ 65 ಟಿಎಂಸಿ ನೀರನ್ನು ಖಾಲಿ ಮಾಡಲೇಬೇಕಿದೆ.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಡ್ಯಾಂನಲ್ಲಿರುವ 105 ಟಿಎಂಸಿ ನೀರಿನ ಪೈಕಿ 65 ಟಿಎಂಸಿ ನೀರನ್ನು ಹೊರಬಿಡಲೇಬೇಕಿದೆ. 65 ಟಿಎಂಸಿ ನೀರನ್ನು ಹೊರಬಿಟ್ಟರಷ್ಟೇ ಗೇಟ್ ರಿಪೇರಿ ಮಾಡಬಹುದಾಗಿದೆ ಎಂದರು.
105 ಟಿಎಂಸಿ ನೀರಿನ ಪೈಕಿ 65 ಟಿಎಂಸಿ ನೀರನ್ನು ಹೊರಬಿಟ್ಟರೆ ರೈತರು ಎರಡು ಬೆಳೆ ಬೆಳೆಯುವ ಬದಲು ಒಂದೇ ಬೆಳೆಗೆ ತೃಪ್ತಿಪಟ್ಟುಕೊಳ್ಳಲಿದ್ದಾರೆ.
ಈ ಭಾಗದಲ್ಲಿ ಹಲವು ಜಿಲ್ಲೆಗಳ ರೈತರು ತುಂಗಭದ್ರಾ ಜಲಾಶಯದ ನೀರನ್ನು ನಂಬಿ ತಮ್ಮ ಜಮೀನುಗಳಲ್ಲಿ ವರ್ಷಕ್ಕೆ ಎರಡು ಬೆಳೆ ಬೆಳೆಯುತ್ತಿದ್ದರು.
ಬೆಳೆಗಳ ಜೊತೆಗೆ ಜನರು ಹಾಗೂ ಜಾನುವಾರುಗಳಿಗೂ ವರ್ಷಪೂರ್ತಿ ಕುಡಿಯಲು ನೀರು ಸಿಗುತ್ತಿತ್ತು. ಈಗ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಹೊರಬಂದ ಹಿನ್ನೆಲೆಯಲ್ಲಿ ರೈತರು ತೀವ್ರ ಬೇಸರದಲ್ಲಿದ್ದು, ಕೇವಲ ಒಂದು ಬೆಳೆಗೆ ಸಮಾಧಾನ ಪಡುವಂತಾಗಿದೆ.
ಇನ್ನು ಗೇಟ್ ಮುರಿದು ಹೋಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳಿಗೆ ಪ್ರವಾಹ ಭೀತಿ ಶುರುವಾಗಿದೆ. ಸಂಜೆಯ ವೇಳೆಗೆ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆಗಳಿವೆ. ಇದರಿಂದ ನದಿ ಪಾತ್ರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…